BMIC ಯೋಜನೆ 
ರಾಜ್ಯ

BMIC ಯೋಜನೆ: ಏಳು ಸಚಿವರನ್ನೊಳಗೊಂಡ ಸಂಪುಟದ ಉಪ ಸಮಿತಿ ರಚನೆ

ಈ ಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗೆ ತನ್ನ ವರದಿ ನೀಡಲಿದೆ.

ಬೆಂಗಳೂರು: ಬೆಂಗಳೂರು- ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ ಅನುಷ್ಠಾನ ಕುರಿತು ಇದುವರೆಗೂ ಆಗಿರುವ ಪ್ರಗತಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಏಳು ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಮಿತಿಯ ಸದಸ್ಯರಾಗಿದ್ದಾರೆ.

ಈ ಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗೆ ತನ್ನ ವರದಿ ನೀಡಲಿದೆ. ಲೋಕೋಪಯೋಗಿ ಇಲಾಖೆಯು ಈ ಸಚಿವ ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದ ದರ್ಶನ್; ನಟನ ವಿರುದ್ಧ ಕೊಲೆ ಆರೋಪ ದಾಖಲಿಸಿದ ಕೋರ್ಟ್

ಜುಬೀನ್ ಗಾರ್ಗ್ ಸಾವು ಅಪಘಾತವಲ್ಲ ಕೊಲೆ: ಅಸ್ಸಾಂ ಸಿಎಂ ಬಿಸ್ವಾ ಶರ್ಮಾ ಆರೋಪಕ್ಕೆ ಸಾಕ್ಷಿ ಕೊಡಿ ಎಂದ ಗೊಗೊಯ್!

Uttar Pradesh: ಬಾಲಕಿಯ ಭೀಕರ ಹತ್ಯೆ, ಅತ್ಯಾಚಾರ; ಗಂಟಲು ಸೀಳಿ, ಕೈಕಾಲುಗಳು ಮುರಿದು, ಮೂಗಿನಲ್ಲಿ ಮರಳು, ಗೋಂದು ತುಂಬಿದ ರಾಕ್ಷಸರು!

ಪ್ರಧಾನಿ ಮೋದಿ ‘ಅಪಮಾನ ಸಚಿವಾಲಯ’ ಆರಂಭಿಸಲಿ: ಪ್ರಿಯಾಂಕಾ ಹೀಗೆ ಹೇಳಿದ್ಯಾಕೆ?

1995 ರಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ಪಾಕಿಸ್ತಾನಕ್ಕೆ ಭಾರತದ ಪರಮಾಣು ಶಸ್ತ್ರಾಸ್ತ್ರಗಳ ಡೇಟಾ ರವಾನೆ; ನಕಲಿ ವಿಜ್ಞಾನಿ ಅಖ್ತರ್ ಹುಸೇನಿ ಬಂಧನ!

SCROLL FOR NEXT