ಶನಿವಾರ ನಾಗರಭಾವಿ ವೃತ್ತದ ಬಳಿ ಕಾರಿನ ಮೇಲೆ ಬಿದ್ದ ಅನಧಿಕೃತ ಬ್ಯಾನರ್ (Photo | Express)
ರಾಜ್ಯ

ಬೆಂಗಳೂರು: ಅನಧಿಕೃತ ಬ್ಯಾನರ್ ಗಾಳಿಗೆ ಮುರಿದು ಬಿದ್ದು ನಾಲ್ವರಿಗೆ ಗಾಯ

ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಅಭಿಮಾನಿಗಳು ಫ್ಲೆಕ್ಸ್'ಗಳನ್ನು ಹಾಕಿದ್ದರು ಎನ್ನಲಾಗಿದೆ.

ಬೆಂಗಳೂರು: ಅನಧಿಕೃತ ಬ್ಯಾನರ್ ಮುರಿದು ಬಿದ್ದ ಪರಿಣಾಮ ನಾಲ್ವರಿಗೆ ಗಾಯಗಳಾಗಿರುವ ಘಟನೆ ನಗರದ ನಾಗರಭಾವಿ ವೃತ್ತದ ಬಳಿ ಶನಿವಾರ ನಡೆದಿದೆ.

ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಅಭಿಮಾನಿಗಳು ಫ್ಲೆಕ್ಸ್'ಗಳನ್ನು ಹಾಕಿದ್ದರು ಎನ್ನಲಾಗಿದೆ.

ಮಳೆ ಹಾಗೂ ಬಲವಾದ ಗಾಳಿಯ ಪರಿಣಾಮ ಸಂಜೆ 4 ಗಂಟೆ ಸುಮಾರಿಗೆ ಬ್ಯಾನರ್ ಮುರಿದು ಬಿದ್ದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮತ್ತು ಮಗಳು ಸೇರಿದಂತೆ ನಾಲ್ವರಿಗ ಗಾಯಳಾಗಿವೆ.

ಬ್ಯಾನರ್ ಮುರಿದು ಬಿದ್ದ ಪರಿಣಾಮ ಕಾರು ಹಾನಿಗೊಳಗಾಗಿದ್ದು. ಘಟನೆ ಬಳಿಕ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಈವರೆಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಚಂದ್ರಾ ಲೇಔಟ್ ಪೊಲೀಸರು ತಿಳಿಸಿದ್ದಾರೆ.

ಘಟನೆ ಬೆನ್ನಲ್ಲೇ ನೆಟ್ಟಿಗರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿದ್ದಾರೆ. ನಗರದಲ್ಲಿ ಬ್ಯಾನರ್‌ಗಳನ್ನು ನಿಷೇಧಿಸಲಾಗಿದೆ. ಆದರೂ, ಮೂಲೆಮೂಲೆಗಳಲ್ಲೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM!

ಆರ್. ಮಾಧವನ್‌ ಹಿರಿಮೆಗೆ ಮತ್ತೊಂದು ಗರಿ: ಬಹುಮುಖ ಪ್ರತಿಭೆ ನಟ, ಚಿತ್ರಕಥೆಗಾರ, ನಿರ್ದೇಶಕನಿಗೆ Padma Shri ಪ್ರಶಸ್ತಿ

India vs Afghanistan: 2 ಎಸೆತದಲ್ಲಿ 3 ವಿಕೆಟ್, 36 ಓವರ್ ನಲ್ಲೇ ಆಪ್ಘನ್ ಹೆಡೆಮುರಿ ಕಟ್ಟಿದ ಭಾರತ, Gill ಪಡೆಗೆ ಇನ್ನಿಂಗ್ಸ್ ಜಯ

ರಾಜ್ಯಸಭೆಗೆ ಸಾಮಾನ್ಯ ಕಾರ್ಯಕರ್ತನನ್ನು BJP ಅಭ್ಯರ್ಥಿ ಮಾಡಿದೆ, ದೇವೇಗೌಡರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: BY Vijayendra

SCROLL FOR NEXT