ಶನಿವಾರ ನಾಗರಭಾವಿ ವೃತ್ತದ ಬಳಿ ಕಾರಿನ ಮೇಲೆ ಬಿದ್ದ ಅನಧಿಕೃತ ಬ್ಯಾನರ್ (Photo | Express)
ರಾಜ್ಯ

ಬೆಂಗಳೂರು: ಅನಧಿಕೃತ ಬ್ಯಾನರ್ ಗಾಳಿಗೆ ಮುರಿದು ಬಿದ್ದು ನಾಲ್ವರಿಗೆ ಗಾಯ

ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಅಭಿಮಾನಿಗಳು ಫ್ಲೆಕ್ಸ್'ಗಳನ್ನು ಹಾಕಿದ್ದರು ಎನ್ನಲಾಗಿದೆ.

ಬೆಂಗಳೂರು: ಅನಧಿಕೃತ ಬ್ಯಾನರ್ ಮುರಿದು ಬಿದ್ದ ಪರಿಣಾಮ ನಾಲ್ವರಿಗೆ ಗಾಯಗಳಾಗಿರುವ ಘಟನೆ ನಗರದ ನಾಗರಭಾವಿ ವೃತ್ತದ ಬಳಿ ಶನಿವಾರ ನಡೆದಿದೆ.

ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಅಭಿಮಾನಿಗಳು ಫ್ಲೆಕ್ಸ್'ಗಳನ್ನು ಹಾಕಿದ್ದರು ಎನ್ನಲಾಗಿದೆ.

ಮಳೆ ಹಾಗೂ ಬಲವಾದ ಗಾಳಿಯ ಪರಿಣಾಮ ಸಂಜೆ 4 ಗಂಟೆ ಸುಮಾರಿಗೆ ಬ್ಯಾನರ್ ಮುರಿದು ಬಿದ್ದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮತ್ತು ಮಗಳು ಸೇರಿದಂತೆ ನಾಲ್ವರಿಗ ಗಾಯಳಾಗಿವೆ.

ಬ್ಯಾನರ್ ಮುರಿದು ಬಿದ್ದ ಪರಿಣಾಮ ಕಾರು ಹಾನಿಗೊಳಗಾಗಿದ್ದು. ಘಟನೆ ಬಳಿಕ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಈವರೆಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಚಂದ್ರಾ ಲೇಔಟ್ ಪೊಲೀಸರು ತಿಳಿಸಿದ್ದಾರೆ.

ಘಟನೆ ಬೆನ್ನಲ್ಲೇ ನೆಟ್ಟಿಗರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿದ್ದಾರೆ. ನಗರದಲ್ಲಿ ಬ್ಯಾನರ್‌ಗಳನ್ನು ನಿಷೇಧಿಸಲಾಗಿದೆ. ಆದರೂ, ಮೂಲೆಮೂಲೆಗಳಲ್ಲೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT