ಓಂ ಪ್ರಕಾಶ್ ಮೃತದೇಹದ ಬಳಿ ಸಂಬಂಧಿಕರ ಆಕ್ರಂದನ 
ರಾಜ್ಯ

ಸಕಲ ಸರ್ಕಾರಿ ಗೌರವದೊಂದಿಗೆ ಕರ್ನಾಟಕ ಮಾಜಿ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ

ಇಂದು ಸಂಜೆ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅವರ ಮಗ ಕಾರ್ತಿಕೇಶ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಬೆಂಗಳೂರು: ಪತ್ನಿ ಮತ್ತು ಮಗಳಿಂದ ಹತ್ಯೆಗೀಡಾದ ರಾಜ್ಯದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಅಂತ್ಯಕ್ರಿಯೆ ಸೋಮವಾರ ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಇಂದು ಸಂಜೆ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅವರ ಮಗ ಕಾರ್ತಿಕೇಶ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಪೊಲೀಸ್ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪುತ್ರ ಕಾರ್ತಿಕೇಶ್ ಅಂತಿಮ ವಿಧಿ-ವಿಧಾನ ನೆರವೇರಿಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.

ಮಾಜಿ ಡಿಜಿಪಿಯ ಸಂಬಂಧಿಕರು, ಸ್ನೇಹಿತರು ಹಾಗೂ ಹಲವು ಗಣ್ಯರು ಅಂತಿಮ ನಮನ ಸಲ್ಲಿಸದರು.

ಅಂತ್ಯಕ್ರಿಯೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ತಿಕೇಶ್, "ನಿನ್ನೆಯ ಘಟನೆಯ ನಂತರ, ನಾನು ದೂರು ನೀಡಿದ್ದೇನೆ. ಪೊಲೀಸರು ತಮ್ಮ ಕೆಲಸ ಮಾಡುತ್ತಿದ್ದಾರೆ ಮತ್ತು ನನಗೆ ಅವರ ಮೇಲೆ ಸಂಪೂರ್ಣ ನಂಬಿಕೆ ಇದೆ. ತನಿಖೆಯಿಂದ ಎಲ್ಲವೂ ಬಹಿರಂಗಗೊಳ್ಳುವುದರಿಂದ ನಾನು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ" ಎಂದರು.

68 ವರ್ಷದ ನಿವೃತ್ತ ಐಪಿಎಸ್ ಅಧಿಕಾರಿಯನ್ನು ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಾರ್ತಿಕೇಶ್ ಅವರ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬಿಹಾರದ ಚಂಪಾರಣ್ ಮೂಲದ ಓಂ ಪ್ರಕಾಶ್ ಅವರು ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಮಾರ್ಚ್ 1, 2015 ರಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್‌ ಈಗ ED ವಶಕ್ಕೆ; '70 ಕೋಟಿ ರೂ. ಅಕ್ರಮ ಹಣ ವರ್ಗಾವಣೆ'

ಅಚ್ಚರಿ: ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಪಾಕಿಸ್ತಾನದ ಪ್ರದೇಶಗಳಿಗೆ ಹಿಂದೂ ಹೆಸರು ಮರು ನಾಮಕರಣ, ಏನಾಗ್ತಿದೆ ಲಾಹೋರ್ ನಲ್ಲಿ?

Uttar Pradesh: ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ, ಭುಜದ ಮೇಲೆ ಹೊತ್ತು ಮೆರವಣಿಗೆ! Video

SCROLL FOR NEXT