ಸೈರಾಬಾನು ನದಾಫ್‌  
ರಾಜ್ಯ

ಗದಗ: ಮದುವೆಗೆ 8 ದಿನ ಇರುವಾಗ ಮಾಜಿ ಪ್ರೇಮಿ Blackmail; ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ಆತ್ಮಹತ್ಯೆ!

ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು ಸೈರಾಬಾನು ಪ್ರೀತಿ ಮಾಡುತಿದ್ದಳು. ಆದರೆ, ಕೆಲ ದಿನಗಳ ಹಿಂದೆ ಲವ್ ಬ್ರೇಕ್ ಆಪ್ ಆಗಿತ್ತು.

ಗದಗ: ಮಾಜಿ ಪ್ರೇಮಿಯ ಬ್ಲಾಕ್ ಮೇಲ್ ಗೆ ಬೇಸತ್ತ ದೈಹಿಕ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದ ಅಸುಂಡಿ ಗ್ರಾಮದಲ್ಲಿ ನಡೆದಿದೆ.

ಅಸುಂಡಿ ಗ್ರಾಮದ 29 ವರ್ಷದ ಸೈರಾಬಾನು ನದಾಫ್‌ ಎಂಬ ದೈಹಿಕ ಶಿಕ್ಷಣ ಶಿಕ್ಷಕಿ ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಗೆ 8 ದಿನ ಇದ್ದರಿಂದ ಯುವತಿ ಪೋಷಕರು ಮದುವೆ ಸಾಮಾಗ್ರಿಗಳನ್ನು ತರಲು ಹೋಗಿದ್ದರು. ಪೋಷಕರು ಮರಳಿ ಬರುವಷ್ಟರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು ಸೈರಾಬಾನು ಪ್ರೀತಿ ಮಾಡುತಿದ್ದಳು. ಆದರೆ, ಕೆಲ ದಿನಗಳ ಹಿಂದೆ ಲವ್ ಬ್ರೇಕ್ ಆಪ್ ಆಗಿತ್ತು. ಲವ್ ಬ್ರೇಕ್ ಅಪ್ ಬಳಿಕ ಪೊಷಕರ ಒತ್ತಾಯ ಮೇರೆಗೆ ಬೇರೆ ಮದುವೆಗೆ ಒಪ್ಪಿಕೊಂಡಿದ್ದಳು. ಆದರೆ, ಶಿಕ್ಷಕಿಯ ಮದುವೆ ತಯಾರಿ ನೋಡಿ ಲವರ್ ಮೈಲಾರಿಯಿದ ಮತ್ತೆ ಟಾರ್ಚರ್ ಶುರುವಾಗಿದೆ. ಬೇರೆ ಮದುವೆ ಆದರೆ ಇಬ್ಬರ ಪೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕ್ತಿದ್ದಾನೆ. ಇದರಿಂದ ಮರ್ಯಾದೆಗೆ ಅಂಜಿ ಆತ್ಮಹತ್ಯೆ ನಿರ್ಧಾರ ಮಾಡಿಕೊಂಡಿದ್ದಾರೆ.

ಸೈರಾಬಾನು ನ್ಯಾಷನಲ್ ಲೇವಲ್ ಕುಸ್ತಿಪಟು ಆಗಿ ಸಾಕಷ್ಟು ಹೆಸರು ಮಾಡಿದ್ದರು. ಹತ್ತಾರು ಮೆಡಲ್, ಕಪ್ ಗೆದ್ದು ಸಾಕಷ್ಟು ಹೆಸರು ಮಾಡಿದ್ದರು. ಇನ್ನೊಂದೆಡೆ ಇಡೀ ಮನೆ ಜವಾಬ್ದಾರಿಯನ್ನು ಈ ಮೃತ ಸೈರಾಬಾನು ಹೊತ್ತಿದ್ದರು. ಈ ಸಂಬಂಧ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT