ಸಂಪುಟ ಸಭೆ(ಸಂಗ್ರಹ ಚಿತ್ರ) 
ರಾಜ್ಯ

ಜಾತಿ ಗಣತಿ ವರದಿ ಮೂಲ ಪ್ರತಿ ಕಳವು ಆರೋಪ: ಮುಂದಿನ ಸಚಿವ ಸಂಪುಟದಲ್ಲಿ ರಾಜ್ಯ ಸರ್ಕಾರ ಚರ್ಚೆ?

ಈಗಾಗಲೇ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಸಚಿವರು ತಮ್ಮ ತಮ್ಮ ಸಮುದಾಯಗಳ ಕುರಿತು ಮಾತನಾಡಿತ್ತಾರೆ. ಇದೀಗ ಮತ್ತೊಮ್ಮೆ ಚರ್ಚೆಸಲಾಗುವುದು, ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರ ನಿರ್ಧಾರ ತೆಗೆದಕೊಳ್ಳಲಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಮುಂದಿನ ಸಚಿವ ಸಂಪುಟ ಸಭೆ ಮೇ.2ರಂದು ನಡೆಯಲಿದ್ದು, ಈ ಸಭೆಯಲ್ಲಿ ಜಾತಿ ಗಣತಿ ವರದಿಯ ಮೂಲ ಪ್ರತಿ ಕಳವು ಆರೋಪ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್ ಅವರು, "ಅನಗತ್ಯ ಆರೋಪಗಳನ್ನು ಮಾಡುವುದರಲ್ಲಿ ಅರ್ಥವಿಲ್ಲ. ಮೂಲ ವರದಿ ಇಲ್ಲದೆ ವರದಿಯನ್ನು ಸಿದ್ಧಪಡಿಸಲು ಹೇಗೆ ಸಾಧ್ಯ? ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು, ಇದು ಗಂಭೀರ ಆರೋಪವಾಗಿದ್ದು, ವಿಪಕ್ಷಗಳ ಆರೋಪ ಕುರಿಚು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಈಗಾಗಲೇ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಸಚಿವರು ತಮ್ಮ ತಮ್ಮ ಸಮುದಾಯಗಳ ಕುರಿತು ಮಾತನಾಡಿತ್ತಾರೆ. ಇದೀಗ ಮತ್ತೊಮ್ಮೆ ಚರ್ಚೆಸಲಾಗುವುದು, ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರ ನಿರ್ಧಾರ ತೆಗೆದಕೊಳ್ಳಲಿದೆ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಆರ್.ಅಶೋಕ್ ಅವರು ಸುಳ್ಳು ಹೇಳಬಾರದು. ಜಾತಿಗಣತಿ ವರದಿ ನಿಜವೇ ಸುಳ್ಳೇ, ನಕಲಿಯೇ ಎಂಬುದರ ಬಗ್ಗೆ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರನ್ನು ಕೇಳಲಿ ಅಥವಾ ಅಧಿಕಾರಿಯಾದ ದಯಾನಂದ್ ಅವರ ಬಳಿ ವಿಚಾರಿಸಿದರೆ ಉತ್ತರ ಸಿಗಬಹುದು ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗ ಸ್ವಾಯತ್ತ ಸಂಸ್ಥೆ. ಸೀಲ್ ಮಾಡಿದ್ದ ವರದಿಯನ್ನು ಕ್ಯಾಬಿನೆಟ್ ಮುಂದೆ ತಂದು ಅಲ್ಲಿಯೇ ತೆರೆದು ನೋಡಲಾಯಿತು. ಇದನ್ನು ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜಾತಿಗಣತಿ ಅನುಷ್ಠಾನಕ್ಕೆ ಇನ್ನೂ ಒಂದು ವರ್ಷವಾಗಲಿದೆ ಎನ್ನುವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಕುರಿತು ಮಾತನಾಡಿ, “ಇದು ಆಂತರಿಕವಾಗಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ವಿಚಾರ. ಸಾರ್ವಜನಿಕವಾಗಿ ಚರ್ಚೆ ಮಾಡುವ ಸಂಗತಿ ಇದಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT