ರಾಜ್ಯ

ಬೆಂಗಳೂರು: ರಸ್ತೆಯಲ್ಲಿ ಕಸ ಹಾಕಬೇಡಿ ಅಂದಿದ್ದಕ್ಕೆ ಪ್ರಾಧ್ಯಾಪಕನಿಗೆ ಹಿಗ್ಗಾಮುಗ್ಗ ಥಳಿತ; ಪ್ರಕರಣ ದಾಖಲು!

ಬೆಂಗಳೂರಿಗೆ ಕೆಲಸ ಮಾಡಲು ಸುರಕ್ಷಿತ ಸ್ಥಳವೆಂದು ಭಾವಿಸಿ ಬಂದಿದ್ದೇನೆ. ಕೆಲವರು ಈ ರೀತಿ ಮಾಡುವ ಮೂಲಕ ನಗರದ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ರಸ್ತೆಯಲ್ಲಿ ಕಸ ಹಾಕಬೇಡಿ ಎಂದು ಹೇಳಿದ್ದಕ್ಕೆ ಕೆಲವು ವ್ಯಕ್ತಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಹಲ್ಲೆಯಲ್ಲಿ ನನ್ನ ದವಡೆ ಮುರಿದಿದೆ ಎಂದು ಪ್ರಾಧ್ಯಾಪಕ ಅರಬಿಂದೋ ಗುಪ್ತಾ ಹೇಳಿದ್ದಾರೆ. ಪ್ರಾಧ್ಯಾಪಕರು ನೀಡಿದ ಮಾಹಿತಿಯ ಆಧಾರದ ಮೇಲೆ ಕುಮಾರಸ್ವಾಮಿ ಲೇಔಟ್ ಪೊಲೀಸರು ದೂರು ದಾಖಲಿಸಿದ್ದಾರೆ.

ನಿನ್ನೆ ಸಂಜೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕೆಲವರು ರಸ್ತೆಯಲ್ಲಿ ಕಸ ಹಾಕುತ್ತಿರುವುದನ್ನು ನೋಡಿದ್ದಾರೆ. ಕಸದಿಂದಾಗಿ ತಮ್ಮ ವಾಹನ ಸ್ಕಿಡ್ ಆಗಬಹುದು ಎಂಬ ಆತಂಕದಿಂದ ಅವರು ಕಸ ಹಾಕದಂತೆ ಕೇಳಿಕೊಂಡಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿ ಗುಂಪು ತಮ್ಮ ಮೇಲೆ ಹಲ್ಲೆ ನಡೆಸಿ, ಹೆಲ್ಮೆಟ್‌ನಿಂದ ಹೊಡೆದಿದೆ ಎಂದು ಗುಪ್ತಾ ಹೇಳಿಕೊಂಡಿದ್ದಾರೆ. ಹಲ್ಲೆಗೆ ಸಾಕ್ಷಿಯಾಗಿ ತಮ್ಮ ಗಾಯಗಳನ್ನು ತೋರಿಸುವ ವೀಡಿಯೊವನ್ನು ಪ್ರಾಧ್ಯಾಪಕರು ಪೊಲೀಸರಿಗೆ ನೀಡಿದ್ದು ನ್ಯಾಯ ಸಿಗುವ ಭರವಸೆ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಕೆಲಸ ಮಾಡಲು ಸುರಕ್ಷಿತ ಸ್ಥಳವೆಂದು ಭಾವಿಸಿ ಬಂದಿದ್ದೇನೆ. ಕೆಲವರು ಈ ರೀತಿ ಮಾಡುವ ಮೂಲಕ ನಗರದ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿತೀಶ್ ಕುಮಾರ್​​​ಗೆ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ; ಬಿಹಾರ ಸಿಎಂ ಆಗಿ "ಅದ್ಭುತ" ಅವಧಿ: ಅಮಿತ್ ಶಾ

T20 World Cup 2026: 2ನೇ ಸೆಮಿಫೈನಲ್ ಕದನ, ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

ಯುದ್ಧದ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

SCROLL FOR NEXT