ರಾಜ್ಯ

ಬೆಂಗಳೂರು: ರಸ್ತೆಯಲ್ಲಿ ಕಸ ಹಾಕಬೇಡಿ ಅಂದಿದ್ದಕ್ಕೆ ಪ್ರಾಧ್ಯಾಪಕನಿಗೆ ಹಿಗ್ಗಾಮುಗ್ಗ ಥಳಿತ; ಪ್ರಕರಣ ದಾಖಲು!

ಬೆಂಗಳೂರಿಗೆ ಕೆಲಸ ಮಾಡಲು ಸುರಕ್ಷಿತ ಸ್ಥಳವೆಂದು ಭಾವಿಸಿ ಬಂದಿದ್ದೇನೆ. ಕೆಲವರು ಈ ರೀತಿ ಮಾಡುವ ಮೂಲಕ ನಗರದ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ರಸ್ತೆಯಲ್ಲಿ ಕಸ ಹಾಕಬೇಡಿ ಎಂದು ಹೇಳಿದ್ದಕ್ಕೆ ಕೆಲವು ವ್ಯಕ್ತಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಹಲ್ಲೆಯಲ್ಲಿ ನನ್ನ ದವಡೆ ಮುರಿದಿದೆ ಎಂದು ಪ್ರಾಧ್ಯಾಪಕ ಅರಬಿಂದೋ ಗುಪ್ತಾ ಹೇಳಿದ್ದಾರೆ. ಪ್ರಾಧ್ಯಾಪಕರು ನೀಡಿದ ಮಾಹಿತಿಯ ಆಧಾರದ ಮೇಲೆ ಕುಮಾರಸ್ವಾಮಿ ಲೇಔಟ್ ಪೊಲೀಸರು ದೂರು ದಾಖಲಿಸಿದ್ದಾರೆ.

ನಿನ್ನೆ ಸಂಜೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕೆಲವರು ರಸ್ತೆಯಲ್ಲಿ ಕಸ ಹಾಕುತ್ತಿರುವುದನ್ನು ನೋಡಿದ್ದಾರೆ. ಕಸದಿಂದಾಗಿ ತಮ್ಮ ವಾಹನ ಸ್ಕಿಡ್ ಆಗಬಹುದು ಎಂಬ ಆತಂಕದಿಂದ ಅವರು ಕಸ ಹಾಕದಂತೆ ಕೇಳಿಕೊಂಡಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿ ಗುಂಪು ತಮ್ಮ ಮೇಲೆ ಹಲ್ಲೆ ನಡೆಸಿ, ಹೆಲ್ಮೆಟ್‌ನಿಂದ ಹೊಡೆದಿದೆ ಎಂದು ಗುಪ್ತಾ ಹೇಳಿಕೊಂಡಿದ್ದಾರೆ. ಹಲ್ಲೆಗೆ ಸಾಕ್ಷಿಯಾಗಿ ತಮ್ಮ ಗಾಯಗಳನ್ನು ತೋರಿಸುವ ವೀಡಿಯೊವನ್ನು ಪ್ರಾಧ್ಯಾಪಕರು ಪೊಲೀಸರಿಗೆ ನೀಡಿದ್ದು ನ್ಯಾಯ ಸಿಗುವ ಭರವಸೆ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಕೆಲಸ ಮಾಡಲು ಸುರಕ್ಷಿತ ಸ್ಥಳವೆಂದು ಭಾವಿಸಿ ಬಂದಿದ್ದೇನೆ. ಕೆಲವರು ಈ ರೀತಿ ಮಾಡುವ ಮೂಲಕ ನಗರದ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT