ರಾಜ್ಯ

ಬೆಂಗಳೂರು: ರಸ್ತೆಯಲ್ಲಿ ಕಸ ಹಾಕಬೇಡಿ ಅಂದಿದ್ದಕ್ಕೆ ಪ್ರಾಧ್ಯಾಪಕನಿಗೆ ಹಿಗ್ಗಾಮುಗ್ಗ ಥಳಿತ; ಪ್ರಕರಣ ದಾಖಲು!

ಬೆಂಗಳೂರಿಗೆ ಕೆಲಸ ಮಾಡಲು ಸುರಕ್ಷಿತ ಸ್ಥಳವೆಂದು ಭಾವಿಸಿ ಬಂದಿದ್ದೇನೆ. ಕೆಲವರು ಈ ರೀತಿ ಮಾಡುವ ಮೂಲಕ ನಗರದ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ರಸ್ತೆಯಲ್ಲಿ ಕಸ ಹಾಕಬೇಡಿ ಎಂದು ಹೇಳಿದ್ದಕ್ಕೆ ಕೆಲವು ವ್ಯಕ್ತಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಹಲ್ಲೆಯಲ್ಲಿ ನನ್ನ ದವಡೆ ಮುರಿದಿದೆ ಎಂದು ಪ್ರಾಧ್ಯಾಪಕ ಅರಬಿಂದೋ ಗುಪ್ತಾ ಹೇಳಿದ್ದಾರೆ. ಪ್ರಾಧ್ಯಾಪಕರು ನೀಡಿದ ಮಾಹಿತಿಯ ಆಧಾರದ ಮೇಲೆ ಕುಮಾರಸ್ವಾಮಿ ಲೇಔಟ್ ಪೊಲೀಸರು ದೂರು ದಾಖಲಿಸಿದ್ದಾರೆ.

ನಿನ್ನೆ ಸಂಜೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕೆಲವರು ರಸ್ತೆಯಲ್ಲಿ ಕಸ ಹಾಕುತ್ತಿರುವುದನ್ನು ನೋಡಿದ್ದಾರೆ. ಕಸದಿಂದಾಗಿ ತಮ್ಮ ವಾಹನ ಸ್ಕಿಡ್ ಆಗಬಹುದು ಎಂಬ ಆತಂಕದಿಂದ ಅವರು ಕಸ ಹಾಕದಂತೆ ಕೇಳಿಕೊಂಡಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿ ಗುಂಪು ತಮ್ಮ ಮೇಲೆ ಹಲ್ಲೆ ನಡೆಸಿ, ಹೆಲ್ಮೆಟ್‌ನಿಂದ ಹೊಡೆದಿದೆ ಎಂದು ಗುಪ್ತಾ ಹೇಳಿಕೊಂಡಿದ್ದಾರೆ. ಹಲ್ಲೆಗೆ ಸಾಕ್ಷಿಯಾಗಿ ತಮ್ಮ ಗಾಯಗಳನ್ನು ತೋರಿಸುವ ವೀಡಿಯೊವನ್ನು ಪ್ರಾಧ್ಯಾಪಕರು ಪೊಲೀಸರಿಗೆ ನೀಡಿದ್ದು ನ್ಯಾಯ ಸಿಗುವ ಭರವಸೆ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಕೆಲಸ ಮಾಡಲು ಸುರಕ್ಷಿತ ಸ್ಥಳವೆಂದು ಭಾವಿಸಿ ಬಂದಿದ್ದೇನೆ. ಕೆಲವರು ಈ ರೀತಿ ಮಾಡುವ ಮೂಲಕ ನಗರದ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT