ಮೃತ ಮಂಜುನಾಥ್ ಕುಟುಂಬ 
ರಾಜ್ಯ

ನಿಮ್ಮೊಂದಿಗೆ ನಾವಿದ್ದೇವೆ: ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿ.ಕೆ ಶಿವಕುಮಾರ್ ಸಾಂತ್ವನ

ನಿಮ್ಮ ಜೊತೆ ನಾವಿದ್ದೇವೆ. ನಮ್ಮ ಸರ್ಕಾರ ನಿಮ್ಮ ಕುಟುಂಬ ಸದಸ್ಯರ ದುಃಖದಲ್ಲಿ ಭಾಗಿಯಾಗಿದೆ. ನಾನು ನಿಮ್ಮ ಕುಟುಂಬದ ಸದಸ್ಯನಂತಿದ್ದು, ಧೈರ್ಯ ಕಳೆದುಕೊಳ್ಳಬೇಡಿ ಎಂದು ಸ್ಥೈರ್ಯ ತುಂಬಿದರು.

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು.

ಮಂಜುನಾಥ್ ಅವರ ಭಾವಮೈದ ಡಾ. ರವಿಕಿರಣ್ ಅವರನ್ನು ಬುಧವಾರ ಬೆಳಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿದ ಡಿಸಿಎಂ ಅವರು, "ನಿಮ್ಮ ಜೊತೆ ನಾವಿದ್ದೇವೆ. ನಮ್ಮ ಸರ್ಕಾರ ನಿಮ್ಮ ಕುಟುಂಬ ಸದಸ್ಯರ ದುಃಖದಲ್ಲಿ ಭಾಗಿಯಾಗಿದೆ. ನಾನು ನಿಮ್ಮ ಕುಟುಂಬದ ಸದಸ್ಯನಂತಿದ್ದು, ಧೈರ್ಯ ಕಳೆದುಕೊಳ್ಳಬೇಡಿ" ಎಂದು ಸ್ಥೈರ್ಯ ತುಂಬಿದರು.

ಇದೇ ವೇಳೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಪ್ರತಿನಿಧಿಗಳ ಜತೆಯೂ ದೂರವಾಣಿ ಕರೆ ಮಾಡಿ ಮಾತನಾಡಿ, "ಮಂಜುನಾಥ್ ಕುಟುಂಬ ಸದಸ್ಯರನ್ನು ಖುದ್ದಾಗಿ ಭೇಟಿ ಮಾಡಿ ಸಾಂತ್ವನ ತಿಳಿಸಿ" ಎಂದು ಸೂಚಿಸಿದರು.

ಇನ್ನೂ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ನಿಂದ ಹಲ್ಲೆಗೆ ಒಳಗಾಗಿರುವ ಕನ್ನಡಿಗ ವಿಕಾಸ್ ಕುಮಾರ್ ಅವರ ಜತೆಗೂ ಇದೇ ವೇಳೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ ಧೈರ್ಯ ತುಂಬಿದರು. ಈ ಪ್ರಕರಣದಲ್ಲಿ ನ್ಯಾಯ ಸಿಗುವಂತೆ ಮಾಡಲಾಗುವುದು, ಯಾವುದಕ್ಕೂ ಹೆದರುವ ಅಗತ್ಯವಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT