ಮೃತ ಮಂಜುನಾಥ್ ಕುಟುಂಬ 
ರಾಜ್ಯ

ನಿಮ್ಮೊಂದಿಗೆ ನಾವಿದ್ದೇವೆ: ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿ.ಕೆ ಶಿವಕುಮಾರ್ ಸಾಂತ್ವನ

ನಿಮ್ಮ ಜೊತೆ ನಾವಿದ್ದೇವೆ. ನಮ್ಮ ಸರ್ಕಾರ ನಿಮ್ಮ ಕುಟುಂಬ ಸದಸ್ಯರ ದುಃಖದಲ್ಲಿ ಭಾಗಿಯಾಗಿದೆ. ನಾನು ನಿಮ್ಮ ಕುಟುಂಬದ ಸದಸ್ಯನಂತಿದ್ದು, ಧೈರ್ಯ ಕಳೆದುಕೊಳ್ಳಬೇಡಿ ಎಂದು ಸ್ಥೈರ್ಯ ತುಂಬಿದರು.

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು.

ಮಂಜುನಾಥ್ ಅವರ ಭಾವಮೈದ ಡಾ. ರವಿಕಿರಣ್ ಅವರನ್ನು ಬುಧವಾರ ಬೆಳಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿದ ಡಿಸಿಎಂ ಅವರು, "ನಿಮ್ಮ ಜೊತೆ ನಾವಿದ್ದೇವೆ. ನಮ್ಮ ಸರ್ಕಾರ ನಿಮ್ಮ ಕುಟುಂಬ ಸದಸ್ಯರ ದುಃಖದಲ್ಲಿ ಭಾಗಿಯಾಗಿದೆ. ನಾನು ನಿಮ್ಮ ಕುಟುಂಬದ ಸದಸ್ಯನಂತಿದ್ದು, ಧೈರ್ಯ ಕಳೆದುಕೊಳ್ಳಬೇಡಿ" ಎಂದು ಸ್ಥೈರ್ಯ ತುಂಬಿದರು.

ಇದೇ ವೇಳೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಪ್ರತಿನಿಧಿಗಳ ಜತೆಯೂ ದೂರವಾಣಿ ಕರೆ ಮಾಡಿ ಮಾತನಾಡಿ, "ಮಂಜುನಾಥ್ ಕುಟುಂಬ ಸದಸ್ಯರನ್ನು ಖುದ್ದಾಗಿ ಭೇಟಿ ಮಾಡಿ ಸಾಂತ್ವನ ತಿಳಿಸಿ" ಎಂದು ಸೂಚಿಸಿದರು.

ಇನ್ನೂ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ನಿಂದ ಹಲ್ಲೆಗೆ ಒಳಗಾಗಿರುವ ಕನ್ನಡಿಗ ವಿಕಾಸ್ ಕುಮಾರ್ ಅವರ ಜತೆಗೂ ಇದೇ ವೇಳೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ ಧೈರ್ಯ ತುಂಬಿದರು. ಈ ಪ್ರಕರಣದಲ್ಲಿ ನ್ಯಾಯ ಸಿಗುವಂತೆ ಮಾಡಲಾಗುವುದು, ಯಾವುದಕ್ಕೂ ಹೆದರುವ ಅಗತ್ಯವಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT