ಸಚಿವ ಸಂಪುಟ ಸಭೆ 
ರಾಜ್ಯ

ಪಹಲ್ಗಾಮ್ ಉಗ್ರ ದಾಳಿ ಖಂಡಿಸಿ ಸಚಿವ ಸಂಪುಟ ನಿರ್ಣಯ ಅಂಗೀಕಾರ; ಗುಪ್ತಚರ ಇಲಾಖೆ ವೈಫಲ್ಯ, ತನಿಖೆಗೆ ಆಗ್ರಹ

ಪುಲ್ವಾಮಾದಿಂದ ಪಹಲ್ಗಾಮ್ ವರೆಗಿನ ಈ ಘೋರ ದಾಳಿಗಳಿಗೆ ಕೇಂದ್ರ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ನಿರ್ಣಯವು ಹೇಳಿದೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ, ಕೇಂದ್ರ ಗೃಹ ಸಚಿವಾಲಯ ಮತ್ತು ಗುಪ್ತಚರ ಇಲಾಖೆ ಉಗ್ರರ ದಾಳಿ ತಡೆಯುವಲ್ಲಿ "ವಿಫಲವಾಗಿವೆ" ಎಂದು ಆರೋಪಿಸಿದೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸುವಂತೆಯೂ ಆಗ್ರಹಿಸಿದೆ.

ಮಂಗಳವಾರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ ಕನಿಷ್ಠ 26 ಜನ ಸಾವನ್ನಪ್ಪಿದ್ದಾರೆ.

"ಪಹಲ್ಗಾಮ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಕರ್ನಾಟಕದ ಜನರ ಪರವಾಗಿ ಮೃತರ ಕುಟುಂಬಗಳಿಗೆ ನಾವು ಹೃತ್ಪೂರ್ವಕ ಸಂತಾಪ ಸೂಚಿಸುತ್ತೇವೆ" ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಭಯೋತ್ಪಾದಕ ದಾಳಿಗಳು ಮಾನವೀಯತೆಯ ವಿರುದ್ಧದ ಘೋರ ಅಪರಾಧಗಳು ಎಂದು ಟೀಕಿಸಲಾಗಿದೆ ಮತ್ತು ಎಲ್ಲಾ ರೀತಿಯ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಹೋರಾಟದಲ್ಲಿ ದೇಶ ಒಗ್ಗಟ್ಟಾಗಬೇಕೆಂದು ಒತ್ತಾಯಿಸಿದೆ.

"ಆದಾಗ್ಯೂ, ಪುಲ್ವಾಮಾದಿಂದ ಪಹಲ್ಗಾಮ್ ವರೆಗಿನ ಈ ಘೋರ ದಾಳಿಗಳಿಗೆ ಕೇಂದ್ರ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ನಿರ್ಣಯವು ಹೇಳಿದೆ. ಗುಪ್ತಚರ ಇಲಾಖೆಯು ತನ್ನ ದೌರ್ಬಲ್ಯ ಮತ್ತು ವೈಫಲ್ಯಗಳಿಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ನಾಚಿಕೆಯಿಂದ ತಲೆ ತಗ್ಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ." "ಇದಲ್ಲದೆ, ನೂರಾರು ಕುಟುಂಬಗಳು ಅನಾಥವಾಗಿವೆ. ಕರ್ನಾಟಕ ಸರ್ಕಾರವು ಗೃಹ ಸಚಿವಾಲಯದ ಈ ವೈಫಲ್ಯವನ್ನು ಬಲವಾಗಿ ಖಂಡಿಸುತ್ತದೆ" ಎಂದು ನಿರ್ಣಯ ಹೇಳಿದೆ.

"ಕೋಮು ಧ್ರುವೀಕರಣದ ದುಷ್ಟ ರಾಜಕೀಯ"ಕ್ಕಾಗಿ ಮುಗ್ಧ ನಾಗರಿಕರ ಮೇಲೆ ಭಯೋತ್ಪಾದಕ ದಾಳಿ ಬಳಸುವುದನ್ನು ಸಚಿವ ಸಂಪುಟ ಖಂಡಿಸಿದೆ ಮತ್ತು ವೈಫಲ್ಯಗಳ ಬಗ್ಗೆ ಸಂಪೂರ್ಣ ತನಿಖೆಗೆ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!