ಎಂ. ಲಕ್ಷ್ಮಣ್ 
ರಾಜ್ಯ

'ಪಹಲ್ಗಾಮ್‌ನಲ್ಲಿ ಧರ್ಮ ಕೇಳಿ ಯಾರನ್ನೂ ಕೊಂದಿಲ್ಲ; 4 ಮರಕ್ಕೆ ಗುಂಡು ಹಾರಿಸಿ, ಸರ್ಜಿಕಲ್ ಸ್ಟ್ರೈಕ್‌ ಎಂದು ಬಿಜೆಪಿ ಬಿಂಬಿಸಿತ್ತು'

ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.

ಮೈಸೂರು: ಪಹಲ್ಗಾಮ್‌ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.

ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿರಕಾರಿದರು.

ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್‌ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?