ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ 
ರಾಜ್ಯ

ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ: ವಿಧೇಯಕ್ಕೆ ರಾಜ್ಯಪಾಲರ ಅನುಮೋದನೆ

ಕಳೆದ ಮಾರ್ಚ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ಉಭಯ ಸದನಗಳಲ್ಲಿ ವಿಧೇಯಕವನ್ನು ಅಂಗೀಕರಿಸಿ ರಾಜ್ಯಪಾಲರ ಸಹಮತಿಗೆ ಕಳುಹಿಸಲಾಗಿತ್ತು.

ಬೆಂಗಳೂರು: ಮಂಡ್ಯ ತಾಲೂಕಿನ ವಿ.ಸಿ ಫಾರ್ಮ್ ನಲ್ಲಿ ನೂತನ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ.

ಕಳೆದ ಮಾರ್ಚ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ಉಭಯ ಸದನಗಳಲ್ಲಿ ವಿಧೇಯಕವನ್ನು ಅಂಗೀಕರಿಸಿ ರಾಜ್ಯಪಾಲರ ಸಹಮತಿಗೆ ಕಳುಹಿಸಲಾಗಿತ್ತು.

ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕದ ಬಗ್ಗೆ ಚರ್ಚಿಸಿ ರಾಜ್ಯಪಾಲರಿಗೆ ಸಹಮತಿ ನೀಡುವಂತೆ ಸಚಿವ ಚಲುವರಾಯಸ್ವಾಮಿ ಮನವಿ ಸಲ್ಲಿಸಿದರು. ಮನವಿ ಪುರಸ್ಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿಧೇಯಕಕ್ಕೆ ಸಹಮತಿ ನೀಡಿ ಅನುಮೋದಿಸಿದ್ದಾರೆ. ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ ಮೊದಲ ಕುಲಪತಿಗಳನ್ನು ರಾಜ್ಯಪಾಲರು ನೇಮಕ ಮಾಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT