ಆರ್ ಅಶೋಕ 
ರಾಜ್ಯ

ಜನಿವಾರ ತೆಗೆಸಿದ ಪ್ರಕರಣ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಬಿಜೆಪಿ ದೂರು

ಸುಚಿವ್ರತ್ ಕುಲಕರ್ಣಿ ಎಂಬ ವಿದ್ಯಾರ್ಥಿ ಏಪ್ರಿಲ್ 17 ರಂದು ಬೀದರ್‌ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಲಾಯಿತು ಎಂದು ಆರೋಪಿಸಿದರು.

ಬೆಂಗಳೂರು: ಇತ್ತೀಚೆಗೆ ರಾಜ್ಯದಾದ್ಯಂತ ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಬರೆಯಲು ಬಂದಿದ್ದ ವಿಪ್ರ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದಕ್ಕೆ ಸಂಬಂಧಿಸಿದಂತೆ, ಇದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಶುಕ್ರವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ಔಪಚಾರಿಕ ದೂರು ದಾಖಲಿಸಿದ್ದಾರೆ.

ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿದ್ದೇನೆ. ನಾಗರಿಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಇಂತಹ ಕಾನೂನುಬಾಹಿರ ಮತ್ತು ತಾರತಮ್ಯದ ಅಭ್ಯಾಸಗಳಿಂದ ವಿದ್ಯಾರ್ಥಿಗಳ ಭವಿಷ್ಯವು ಅಪಾಯಕ್ಕೆ ಸಿಲುಕಬಾರದು. ವಿಶೇಷವಾಗಿ ಯುವಕರ ಹಕ್ಕುಗಳು ಮತ್ತು ಘನತೆಯನ್ನು ಕಾಪಾಡಲು ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಆಯೋಗಕ್ಕೆ ಮನವಿ ಮಾಡಿದ್ದೇನೆ' ಎಂದು ಅವರು ಹೇಳಿದರು.

ಸುಚಿವ್ರತ್ ಕುಲಕರ್ಣಿ ಎಂಬ ವಿದ್ಯಾರ್ಥಿ ಏಪ್ರಿಲ್ 17 ರಂದು ಬೀದರ್‌ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಲಾಯಿತು ಎಂದು ಆರೋಪಿಸಿದರು.

'ಏಪ್ರಿಲ್ 17ರಂದು ನನ್ನ ಗಣಿತ ಸಿಇಟಿ ಪರೀಕ್ಷೆ ಇತ್ತು. ನಾನು ಪರೀಕ್ಷಾ ಕೇಂದ್ರವನ್ನು ತಲುಪಿದಾಗ, ಕಾಲೇಜು ಆಡಳಿತ ಮಂಡಳಿ ನನ್ನನ್ನು ಪರಿಶೀಲಿಸಿತು ಮತ್ತು ನನ್ನ ಜನಿವಾರವನ್ನು ನೋಡಿತು. ಅವರು ಅದನ್ನು ಕತ್ತರಿಸಲು ಅಥವಾ ತೆಗೆದುಹಾಕಲು ನನ್ನನ್ನು ಕೇಳಿದರು. ಅದನ್ನು ತೆಗೆದರೆ ಮಾತ್ರ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವುದಾಗಿ ಹೇಳಿದರು. 45 ನಿಮಿಷಗಳ ಕಾಲ, ನಾನು ಅವರನ್ನು ವಿನಂತಿಸುತ್ತಲೇ ಇದ್ದೆ. ಆದರೆ, ಕೊನೆಗೆ ನಾನು ಮನೆಗೆ ಹಿಂತಿರುಗಬೇಕಾಯಿತು. ಸರ್ಕಾರ ಮರು ಪರೀಕ್ಷೆ ನಡೆಸಬೇಕೆಂದು ಅಥವಾ ಸರ್ಕಾರಿ ಕಾಲೇಜಿನಲ್ಲಿ ನನಗೆ ಸೀಟು ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ' ಎಂದು ಕುಲಕರ್ಣಿ ಹೇಳಿದರು.

ಜನಿವಾರ ತೆಗೆಯರು ನಿರಾಕರಿಸಿ, ಗಣಿತ ಪರೀಕ್ಷೆಗೆ ಹಾಜರಾಗದೇ ಮನೆಗೆ ತೆರಳಿದ್ದ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿಗೆ ಸರ್ಕಾರ ಎರಡು ಆಯ್ಕೆಗಳನ್ನು ನೀಡಿದೆ. ಈ ಕುರಿತು ಪರಿಶೀಲನೆ ನಡೆಸಲು ನೇಮಿಸಿದ್ದ ತಜ್ಞರ ಸಮಿತಿಯು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳಲ್ಲಿ ಪಡೆದ ಸರಾಸರಿ ಅಂಕಗಳನ್ನು ಗಣಿತ ವಿಷಯಕ್ಕೆ ನೀಡಲು ಶಿಫಾರಸು ಮಾಡಿದೆ. ಅಲ್ಲದೆ, ಮತ್ತೆ ಪರೀಕ್ಷೆ ಬರೆಯುವ ಅವಕಾಶವನ್ನು ನೀಡಲಾಗಿದೆ. ವಿದ್ಯಾರ್ಥಿಯು ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT