ರಾಜ್ಯ

ಮಂಗಳೂರು: 2023ರ ಮುಸ್ಲಿಂರ ಹತ್ಯೆ; ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡಿದ್ದ ವ್ಯಕ್ತಿ ಬಂಧನ!

2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಚೇತನ್ ಸಿಂಗ್ ಎಂಬಾತ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದವನಿಗೆ ಶಿಕ್ಷೆಯಾಗಿದ್ದರೆ ಇಂದು ಕಾಶ್ಮೀರದಲ್ಲಿ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಪೋಸ್ಟ್ ಮಾಡುವ ಮೂಲಕ ಪಹಲ್ಗಾಮ್ ಉಗ್ರ ದಾಳಿಯನ್ನು ಸಮರ್ಥಿಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

ಮಂಗಳೂರು: 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಚೇತನ್ ಸಿಂಗ್ ಎಂಬಾತ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದವನಿಗೆ ಶಿಕ್ಷೆಯಾಗಿದ್ದರೆ ಇಂದು ಕಾಶ್ಮೀರದಲ್ಲಿ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಪೋಸ್ಟ್ ಮಾಡುವ ಮೂಲಕ ಪಹಲ್ಗಾಮ್ ಉಗ್ರ ದಾಳಿಯನ್ನು ಸಮರ್ಥಿಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

ನಿಚ್ಚು ಮಂಗಳೂರು ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಉಳ್ಳಾಲ ತಾಲೂಕಿನ ಉಳ್ಳಾಲತ್ತಿ ನಿವಾಸಿ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಯ ಕುರಿತು ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ಪೋಸ್ಟ್‌ನಲ್ಲಿ ಒಳಗೊಂಡಿತ್ತು. ದೂರುದಾರರು ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಮತ್ತು ಬಳಕೆದಾರರ ಪ್ರೊಫೈಲ್ ಅನ್ನು ಸಾಕ್ಷ್ಯಕ್ಕಾಗಿ ಸಲ್ಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (BNS), 2023 ರ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?