ವಿನಯ್ ಕುಲಕರ್ಣಿ 
ರಾಜ್ಯ

ಕಿರುಕುಳ‌ ಕೊಡುವುದಕ್ಕೂ ಒಂದು ಮಿತಿಯಿರಬೇಕು: ED ದಾಳಿ ವಿರುದ್ಧ ವಿನಯ್​ ಕುಲಕರ್ಣಿ ಕಿಡಿ

ಜಾರಿ ನಿರ್ದೇಶಾನಾಲಯದ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಇಡಿ ದಾಳಿಯ ಹಿಂದೆ ಕಾಣದ ಕೈಗಳಿದ್ದು, ನನ್ನ ಮೇಲೆ ಯಾವೆಲ್ಲಾ ಪ್ರಕರಣ ದಾಖಲಿಸಬಹುದೋ ಎಲ್ಲವನ್ನೂ ದಾಖಲಿಸಿದ್ದಾರೆ.

ಬೆಂಗಳೂರು: ಪಕ್ಷ ಯಾವುದೇ ಇರಲಿ ಓರ್ವ ಮನುಷ್ಯನಿಗೆ ಕಿರುಕುಳ‌ ಕೊಡುವುದಕ್ಕೂ ಒಂದು ಮಿತಿಯಿರಬೇಕು. ಅಧಿಕಾರವಿದೆ ಎಂದು ಈ ರೀತಿ ಬಳಸಿಕೊಳ್ಳುತ್ತಿರುವುದು ನಿಜವಾಗಿಯೂ ನೋವಿನ ಸಂಗತಿ ಎಂದು ಕಾಂಗ್ರೆಸ್​​ ಶಾಸಕ ವಿನಯ್​ ಕುಲಕರ್ಣಿ ಅವರು ಕಿಡಿಕಾರಿದ್ದಾರೆ.

ಜಾರಿ ನಿರ್ದೇಶಾನಾಲಯದ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಇಡಿ ದಾಳಿಯ ಹಿಂದೆ ಕಾಣದ ಕೈಗಳಿದ್ದು, ನನ್ನ ಮೇಲೆ ಯಾವೆಲ್ಲಾ ಪ್ರಕರಣ ದಾಖಲಿಸಬಹುದೋ ಎಲ್ಲವನ್ನೂ ದಾಖಲಿಸಿದ್ದಾರೆ. ಇದೀಗ ನಡೆದಿರುವ ದಾಳಿ ಕೂಡ ರಾಜಕೀಯ ಷಡ್ಯಂತ್ರ ಎಂದು ಹೇಳಿದ್ದಾರೆ.

ಪರಿಶೀಲನೆ ನಡೆಸಲು ಹಾಗೂ ಷಡ್ಯಂತ್ರ ನಡೆಸಲು ಇಡಿ ಅಧಿಕಾರಿಗಳು ಬರುತ್ತಾರೆ. ಇದು ಇಂದು, ನಿನ್ನೆಯದ್ದಲ್ಲ. ಶಾಸಕನಾಗಿ ನನ್ನ ಕ್ಷೇತ್ರಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ, ಜನರನ್ನು ಭೇಟಿಯಾಗಲು ಆಗುತ್ತಿಲ್ಲ. ನನಗೆ ಕಿರುಕುಳ ನೀಡುವುದು ಮಾತ್ರ ನಿಂತಿಲ್ಲ. ಪಕ್ಷ ಯಾವುದೇ ಇರಲಿ ಓರ್ವ ಮನುಷ್ಯನಿಗೆ ಕಿರುಕುಳ‌ ಕೊಡುವುದಕ್ಕೂ ಒಂದು ಮಿತಿಯಿರಬೇಕು. ಅಧಿಕಾರವಿದೆ ಎಂದು ಈ ರೀತಿ ಬಳಸಿಕೊಳ್ಳುತ್ತಿರುವುದು ನಿಜವಾಗಿಯೂ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಐಶ್ವರ್ಯಾ ಗೌಡ ಜೊತೆ ಯಾವ ವ್ಯವಹಾರವನ್ನು ಹೊಂದಿಲ್ಲ, ಹಣದ ವರ್ಗಾವಣೆಯೂ ಆಗಿಲ್ಲ. ಮಂಜುಳಾ ಪಾಟೀಲ್​ ಮತ್ತು ಐಶ್ವರ್ಯಾ ಗೌಡ ನಡುವೆ ನಾನು‌ ರಾಜಿ ಸಂಧಾನ ಮಾಡಿಸಿಲ್ಲ. ಈಗ ಕೆಲ ತಿಂಗಳ ಹಿಂದೆ ಪ್ರಕರಣ ದಾಖಲಾದ ನಂತರ ಪರಿಚಯವಷ್ಟೆ. ಪ್ರಕರಣ ಮುಂದುವರೆಸುವುದು ಬೇಡ, ನನ್ನ ಹಣ ಕೊಡಿಸಿ ಎಂದು ಬಂದಾಗ ಕರೆದು ವಿಚಾರಿಸಿದ್ದೆ. ಅವರವರ ನಡುವೆ ಮಾತುಕತೆ ಸರಿ‌ ಹೋಗಲಿಲ್ಲವಂತೆ. ಜನರಿಗೆ ಯಾರೇ ಮೋಸ ಮಾಡಿದರೂ ತಪ್ಪೇ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT