ಕಾರು ಚಾಲಕನ ಮೇಲೆ ಮಹಿಳಾ ಪೇದೆ ಹಲ್ಲೆ 
ರಾಜ್ಯ

Road rage in Bengaluru: ಕ್ಷುಲ್ಲಕ ವಿಚಾರಕ್ಕೆ ಚಾಲಕನ ಮೇಲೆ ಮಹಿಳೆ ಥಳಿತ, ಕಾಲಿನಿಂದ ಒದ್ದು ಹಲ್ಲೆ, Video Viral

ಮಹಿಳೆಯೊಬ್ಬರು ಯುವಕರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಫುಡ್ ಡೆಲಿವರಿ ಬಾಯ್ ಮೇಲಿನ ದಾಳಿ ಪ್ರಕರಣ ಹಸಿರಾಗಿರುವಂತೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಂತಹುದೇ ಘಟನೆ ವರದಿಯಾಗಿದ್ದು, ಕ್ಷುಲ್ಲಕ ವಿಚಾರಕ್ಕೆ ಮಹಿಳೆಯೊಬ್ಬರು ಯುವಕರಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಮಹಿಳೆಯೊಬ್ಬರು ಯುವಕರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕಾರು ಪಾರ್ಕಿಂಗ್ ಮತ್ತು ರಿವರ್ಸ್ ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಕಾರು ಚಾಲಕ ಶಿವರಾಜ್ ತನ್ನ ಕಾರನ್ನು ರಿವರ್ಸ್ ತೆಗೆಯುವ ವೇಳೆ ಸಬ್ರೀನ್ ಎಂಬ ಮಹಿಳೆ ಕಿರಿಕ್ ತೆಗೆದಿದ್ದು, ಕಾರು ಟಚ್ ಆಯಿತು ಎಂದು ಗಲಾಟೆ ಆರಂಭಿಸಿದ್ದಾರೆ. ವೃತ್ತಿಯಲ್ಲಿ ಮಹಿಳೆ ಸಬ್ರೀನ್ ಪೊಲೀಸ್ ಪೇದೆ ಎಂದು ಹೇಳಲಾಗಿದೆ.

ವಿಡಿಯೋದಲ್ಲಿರುವಂತೆ ಅಲ್ಲಿ ಸಾಕಷ್ಟು ಮಂದಿ ಇವರ ಜಗಳ ಬಿಡಿಸಲು ಮುಂದಾದರೂ ಕೇಳದ ಸಬ್ರೀನ್ ಚಾಲಕನ ಮೇಲೆ ಹಲ್ಲೆ ನಡೆಸಿ ಕಾಲಿಂದ ಒದ್ದು ಕೆಳಗೆ ಬೀಳಿಸಿದ್ದಾರೆ. ಅಲ್ಲದೆ ಈ ಘಟನೆಯ ವಿಡಿಯೋ ತೆಗೆಯುತ್ತಿದ್ದ ದರ್ಶನ್ ಎಂಬ ವ್ಯಕ್ತಿ ಮೇಲೂ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

NCR ದಾಖಲು

ಇನ್ನು ಹಲ್ಲೆ ಪ್ರಕರಣ ಸಂಬಂಧ ಕಾರು ಚಾಲಕ ಶಿವರಾಜ್ ಮತ್ತಿತ್ತರು ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಿಸಿದ್ದು, ಪೊಲೀಸರು ಸಬ್ರೀನ್ ಅವರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸಬ್ರೀನ್ ಯುವಕರಿಗೆ ಕ್ಷಮೆ ಕೇಳಿದ್ದಾರೆ ಎಂದು ಹೇಳಲಾಗಿದೆ.

ಕ್ರಮಕ್ಕೆ ಆಗ್ರಹ

ಇನ್ನು ಬೆಂಗಳೂರಿನಲ್ಲಿ ಇಂತಹ ಹಲ್ಲೆ ಪ್ರಕರಣಗಳು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಈ ಕುರಿತು ಬೆಂಗಳೂರು ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಓರ್ವ ಪುರುಷನನ್ನು ಮಹಿಳೆ ಕಾಲಿನಿಂದ ಒದ್ದು ಹಲ್ಲೆ ಮಾಡುತ್ತಿರುವುದು ಸರಿಯಲ್ಲ ಎಂದು ಮತ್ತೋರ್ವ ಬಳಕೆದಾರರು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT