ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಿದ್ದರಾಮಯ್ಯ 
ರಾಜ್ಯ

ಜಾತಿ ಗಣತಿ ಯಾವುದೇ ಸಮುದಾಯದ ವಿರುದ್ಧ ಅಲ್ಲ: ಸಿಎಂ ಸಿದ್ದರಾಮಯ್ಯ

ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಿಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದಿದ್ದಾರೆ.

ಚಾಮರಾಜನಗರ: ಸ್ವಾತಂತ್ರ್ಯದ 75 ವರ್ಷಗಳ ನಂತರವೂ ನಿಜವಾದ ಸಾಮಾಜಿಕ ನ್ಯಾಯವನ್ನು ಸಾಧಿಸಲಾಗಿಲ್ಲ, ಅಂಚಿನಲ್ಲಿರುವ ಸಮುದಾಯಗಳ ಜೀವನ ಪರಿಸ್ಥಿತಿಗಳನ್ನು ಅರ್ಥಮಾಡಿಕೊಳ್ಳಲು ಇಂತಹ ಸಮೀಕ್ಷೆಯ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, 2015 ರ ಸಮೀಕ್ಷೆ ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅದನ್ನು ಸ್ವೀಕರಿಸಲಿಲ್ಲ, ನಾನು ಈಗ ವರದಿಯನ್ನು ಸ್ವೀಕರಿಸಿ ಸಂಪುಟದ ಮುಂದೆ ಮಂಡಿಸಿದ್ದೇನೆ ಎಂದು ಅವರು ಹೇಳಿದರು.

ಬಿಜೆಪಿ ನಾಯಕರು ಸಹಕಾರಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು, ಆದರೆ ನೀವು ಸಂವಿಧಾನವನ್ನು ವಿರೋಧಿಸಿದ ಬಿಜೆಪಿಯ ಭಾಗವಾಗಿದ್ದೀರಿ. ನೀವು ಯಡಿಯೂರಪ್ಪ ಅಥವಾ ಪ್ರಲ್ಹಾದ್ ಜೋಶಿ ಅವರ ಬಳಿ ಈ ಕಳವಳವನ್ನು ವ್ಯಕ್ತಪಡಿಸಿದ್ದೀರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕ ರಾಮಾ ಜೋಯಿಸರು ಮೀಸಲಾತಿ ವ್ಯವಸ್ಥೆಗೆ ಸವಾಲು ಹಾಕಿದರು ಎಂದು ಆರೋಪಿಸಿದ ಅವರು, ಸಮೀಕ್ಷೆಯ ವರದಿಯನ್ನು ಬಿಜೆಪಿ ವಿರೋಧಿಸುತ್ತಿದೆ ಎಂದು ಟೀಕಿಸಿದರು. "ನೀವು ನನ್ನ ಪರವಾಗಿ ಚಪ್ಪಾಳೆ ತಟ್ಟುವುದು ದುರದೃಷ್ಟಕರ ಮತ್ತು ಜಾತಿ ಗಣತಿ ವರದಿಯನ್ನು ವಿರೋಧಿಸುವವರನ್ನು ಬೆಂಬಲಿಸುವುದು ದುರದೃಷ್ಟಕರ. ನಿಮ್ಮ ಉದ್ದೇಶವನ್ನು ಬೆಂಬಲಿಸುವವರ ಪರವಾಗಿ ನೀವು ನಿಲ್ಲಬೇಕು" ಎಂದು ಅವರು ಪ್ರತಿಪಾದಿಸಿದರು. ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT