ಲಕ್ಷ್ಮಣ್ ಸವದಿ 
ರಾಜ್ಯ

ಉಗ್ರರ ದಾಳಿ ಬಳಿಕ ಕೇಂದ್ರದ ಕ್ರಮ ಶ್ಲಾಘನೀಯ, POK ವಶಪಡಿಸಿಕೊಂಡು ಪಾಕ್'ಗೆ ತಕ್ಕ ಪಾಠ ಕಲಿಸಿ: ಲಕ್ಷ್ಮಣ್ ಸವದಿ

ನಾವು ಭಾರತೀಯ ಪ್ರಜೆಗಳಾಗಿ ಒಟ್ಟಾಗಿದ್ದೇವೆ. ಉಗ್ರಗಾಮಿಗಳನ್ನು ನಿಗ್ರಹ ಮಾಡಲು ಕೇಂದ್ರ ಸರಕಾರ ಮೊದಲು ಪಿಒಕೆಯನ್ನು ವಶಪಡಿಸಿಕೊಳ್ಳಬೇಕು.

ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿ ಘಟನೆ ಬಳಿಕ ಕೇಂದ್ರ ಸರ್ಕಾರ ಕೈಗೊಂಡ ಕ್ರಮವನ್ನು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಶ್ಲಾಘಿಸಿದ್ದು, ಆದಷ್ಟು ಬೇಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ಪಡೆದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿ ಎಂದು ಒತ್ತಾಯಿಸಿದ್ದಾರೆ.

ಅಥಣಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 26 ಅಮಾಯಕ ಪ್ರವಾಸಿಗರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಅವರ ದುಃಖಿತ ಕುಟುಂಬಗಳಿಗೆ ಶಕ್ತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯನ್ನು ಯಾರೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ನಾವು ಭಾರತೀಯ ಪ್ರಜೆಗಳಾಗಿ ಒಟ್ಟಾಗಿದ್ದೇವೆ. ಉಗ್ರಗಾಮಿಗಳನ್ನು ನಿಗ್ರಹ ಮಾಡಲು ಕೇಂದ್ರ ಸರಕಾರ ಮೊದಲು ಪಿಒಕೆಯನ್ನು ವಶಪಡಿಸಿಕೊಳ್ಳಬೇಕು ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಬಹಳ ದೊಡ್ಡದಾಗಿ ಬೆಳೆಯುತ್ತಿದೆ. ಅಲ್ಲಿರುವ ಸಾರ್ವಜನಿಕರು ನೆಮ್ಮದಿಯಿಂದ ಜೀವನ ಕಟ್ಟಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಎಂದರೆ ಅದು ಭೂಲೋಕದ ಸ್ವರ್ಗ ಎಂದು ಪ್ರಖ್ಯಾತಿಯನ್ನು ಪಡೆದಿದೆ. ನಾನು ಕೂಡ ಕಳೆದ ಆರು ತಿಂಗಳ ಹಿಂದೆ ಭೇಟಿ ನೀಡಿದ್ದೆ. ಈ ಘಟನೆಯಿಂದಾಗಿ ಅಲ್ಲಿನ ಪ್ರವಾಸೋದ್ಯಮ ಕುಗ್ಗಿದೆ. ಈ ಉಗ್ರಗಾಮಿಗಳ ನಿರ್ಮೂಲನೆಗೆ ನಾವು ಎಲ್ಲರೂ ಒಗ್ಗಟ್ಟಾಗಿ ಬೆಂಬಲವನ್ನು ನೀಡುತ್ತೇವೆ. ಈಗಾಗಲೇ ಕೇಂದ್ರ ಸರಕಾರ ಪಾಕಿಸ್ತಾನ ವಿರುದ್ಧ ರಾಜತಾಂತ್ರಿಕ ನಿರ್ಣಯಗಳನ್ನು ಕೈಗೊಂಡಿದೆ. ಉಗ್ರರ ದಾಳಿ ಬಳಿಕ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮ ಶ್ಲಾಘನೀಯವಾಗಿದ್ದು, ಇದಕ್ಕೆ ನನ್ನ ಬೆಂಬಲವಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!