ಸಂಗ್ರಹ ಚಿತ್ರ 
ರಾಜ್ಯ

ಪ್ರಯಾಣಿಕರೇ ಎಚ್ಚರ: ಮೆಜೆಸ್ಟಿಕ್'ನಲ್ಲಿ ಹೆಚ್ಚಿದ ಕಳ್ಳರ ಕೈಚಳಕ; ಮೂವರ ಲ್ಯಾಪ್‌ಟಾಪ್‌ ಎಗರಿಸಿದ ಖದೀಮರು!

ಒಂದು ಕ್ಷಣ ಯಾಮಾರಿದರೂ ಜೇಬಲ್ಲಿದ್ದ ದುಡ್ಡು, ಬ್ಯಾಗ್‌, ಮೊಬೈಲ್‌, ಲ್ಯಾಪ್‌ಟಾಪ್‌ಗಳು ಮಾಯವಾಗಿ ಹೋಗುತ್ತದೆ.

ಬೆಂಗಳೂರು: ಮೆಜೆಸ್ಟಿಕ್ ಸುತ್ತಮುತ್ತ ನಡೆದಾಡುವಾಗ ಸ್ವಲ್ಪ ಎಚ್ಚರಿಕೆ ಇರಲಿ! ಒಂದು ಕ್ಷಣ ಯಾಮಾರಿದರೂ ಜೇಬಲ್ಲಿದ್ದ ದುಡ್ಡು, ಬ್ಯಾಗ್‌, ಮೊಬೈಲ್‌, ಲ್ಯಾಪ್‌ಟಾಪ್‌ಗಳು ಮಾಯವಾಗಿ ಹೋಗುತ್ತದೆ. ಇನ್ನು ತಡರಾತ್ರಿ ಓಡಾಟ ನಡೆಸುವಾಗ ರಕ್ಷಣೆ ಬಗ್ಗೆ ಒಂದು ಕೈಹೆಚ್ಚಾಗಿಯೇ ಕ್ರಮವಹಿಸಬೇಕು. ಹೌದು, ಕಳ್ಳರು, ಸುಲಿಗೆಕೋರರ ಹಾವಳಿ ಈ ಪ್ರದೇಶದಲ್ಲಿ ಹೆಚ್ಚಾಗುತ್ತಿದೆ.

ಏಪ್ರಿಲ್ 12, 16 ಮತ್ತು 18 ರಂದು ಕ್ರಮವಾಗಿ ಟರ್ಮಿನಲ್ 1,2, ಮತ್ತು 3ರಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಮೂವರ ಲ್ಯಾಪ್ ಟಾಪ್ ಗಳನ್ನು ಕಳ್ಳತನ ಮಾಡಿದ್ದಾರ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆಪಿ ನಗರದಲ್ಲಿ ವಾಸವಿರುವ ಬಿ.ಟೆಕ್ ವಿದ್ಯಾರ್ಥಿ ಅಜನ್ (21) ಏಪ್ರಿಲ್ 12 ರಂದು ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದರು. ನೀರು ಖರೀದಿಸಲು ಟರ್ಮಿನಲ್ 3 ರಲ್ಲಿ ಬಸ್ ಇಳಿದ ನಂತರ 60,000 ರೂ. ಮೌಲ್ಯದ ಅವರ ಲ್ಯಾಪ್‌ಟಾಪ್ ಕಳ್ಳತನವಾಗಿದೆ.

ಅಜನ್ ಅವರು ತಮ್ಮ ಲ್ಯಾಪ್‌ಟಾಪ್ ಅನ್ನು ಸೀಟಿನ ಮೇಲಿನ ಲಗೇಜ್ ವಿಭಾಗದಲ್ಲಿ ಇರಿಸಿದ್ದರು. ಮತ್ತೆ ಬಸ್ ಹತ್ತಿದ ನಂತರ, ಮೊದಲ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಇತರ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.

ಆರೋಪಿ ಬಸ್ ಹತ್ತಿದ್ದನ್ನು ನಾನು ಗಮನಿಸಿದ್ದೆ. ವ್ಯಕ್ತಿ ಚೆನ್ನಾಗಿ ಬಟ್ಟೆ ಧರಿಸಿದ್ದರು. ಇಪ್ಪತ್ತು ವಯಸ್ಸಿನ ಯುವಕ ಹಾಗೂ ಖಾಸಗಿ ಸಂಸ್ಥೆಯ ಉದ್ಯೋಗಿ ಎಂಬಂತೆ ಕಾಣಿಸುತ್ತಿದ್ದ ಎಂದು ಅಜನ್ ಅವರು ಹೇಳಿದ್ದಾರೆ.

ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ 26 ವರ್ಷದ ವೈದ್ಯಕೀಯ ಪ್ರತಿನಿಧಿ ಅನುಷಾ ಎಂಬುವವರ ಲ್ಯಾಪ್ ಟಾಪ್ ಕೂಡ ಕಳ್ಳತವಾಗಿದೆ.

ರಾತ್ರಿ 10 ರಿಂದ 10.30 ರ ನಡುವೆ ಘಟನೆ ನಡೆದಿದೆ. ಟರ್ಮಿನಲ್ 2 ರಲ್ಲಿ ಲಗೇಜ್ ಅನ್ನು ಹೊರತೆಗೆಯುವಾಗ 50,000 ರೂ. ಮೌಲ್ಯದ ಲ್ಯಾಪ್‌ಟಾಪ್ ಕಳ್ಳತನವಾಗಿದೆ. ಇದರ ಜೊತೆಗೆ ಬ್ಯಾಗ್ ನಲ್ಲಿದ್ದ ಪ್ಯಾನ್ ಕಾರ್ಡ್ ಹಾಗೂ ಎಲೆಕ್ಷನ್ ಐಡಿ ಹಾಗೂ ಇತರೆ ದಾಖಲೆಗಳೂ ನಾಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.

ಮತ್ತೊಂದು ಘಟನೆಯಲ್ಲಿ ದಾವಣಗೆರೆಯ ವೈದ್ಯಕೀಯ ಪ್ರತಿನಿಧಿ ಮಂಜುನಾಥ್ (36) ಅವರು ರಾತ್ರಿ 11.30 ರಿಂದ 11.40 ರ ನಡುವೆ ಟರ್ಮಿನಲ್ 1 ರಲ್ಲಿ ಸ್ನೇಹಿತನೊಂದಿಗೆ ಬಸ್‌ಗಾಗಿ ಕಾಯುತ್ತಿದ್ದಾಗ 25,000 ರೂ. ಮೌಲ್ಯದ ಲ್ಯಾಪ್‌ಟಾಪ್ ಅನ್ನು ಕಳೆದುಕೊಂಡಿದ್ದಾರೆ.

ಮೂರು ಪ್ರಕರಣಗಳು ನಮ್ಮ ಗಮನಕ್ಕೆ ಬಂದಿದ್ದು, ಆರೋಪಿ ಪತ್ತೆಗೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿ ವೃತ್ತಿಪರನಂತೆ ತೋರುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT