ಡಿ.ಕೆ. ಶಿವಕುಮಾರ್  
ರಾಜ್ಯ

ಕಾಂಗ್ರೆಸ್ ಸರ್ಕಾರದಿಂದ ಜನರ ಋಣ ತೀರಿಸುವ ಕೆಲಸ; ರೈತರ ವಿರುದ್ಧವೇ ಬಿಜೆಪಿ ಪ್ರತಿಭಟನೆ: ಡಿ.ಕೆ ಶಿವಕುಮಾರ್

ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲೇ ಹಾಲಿನ ಬೆಲೆ ಕಡಿಮೆ ಇದೆ. ರೈತರ ನೆರವಿಗೆ ಧಾವಿಸಿದ ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ.

ದೇವನಹಳ್ಳಿ: ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಜತೆಗೆ, ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ದೇವನಹಳ್ಳಿಯಲ್ಲಿ ಭಾನುವಾರ ನಡೆದ ಸಾಧನಾ ಸಮಾವೇಶ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ಇದು ಸಾಧನೆಯ ಸಮಾವೇಶ. ಅಧಿಕಾರ ನಶ್ವರ, ಸಾಧನೆಗಳು ಅಜರಾಮರ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನೇ ಈಶ್ವರ. ರಾಜ್ಯದ ಮತದಾರರು 136 ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ನಮಗೆ ಅಧಿಕಾರ ಕೊಟ್ಟಿದ್ದೀರಿ. ಇಬ್ಬರು ಪಕ್ಷೇತರರು ಹಾಗೂ ಮತ್ತಿಬ್ಬರು ಶಾಸಕರು ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆಮೂಲಕ ನಮ್ಮದು 140 ಸಂಖ್ಯಾಬಲದ ಸರ್ಕಾರ. ಈ ಸರ್ಕಾರ ಇಂದು ನಿಮ್ಮ ಋಣ ತೀರಿಸುವ ಕೆಲಸ ಮಾಡಿದೆ” ಎಂದು ತಿಳಿಸಿದರು.

“ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಮುನಿಯಪ್ಪ ಅವರ ನೇತೃತ್ವದಲ್ಲಿ ಶರತ್ ಬಚ್ಛೆಗೌಡ ಶ್ರೀನಿವಾಸ್ ವೆಂಕಟರಮಣಪ್ಪ ಅವರ ಸಹಕಾರ ಪರಿಷತ್ ಸದಸ್ಯರಾದ ರಾಮೋಜಿ ಗೌಡರು ಹಾಗೂ ರವಿ ಅವರ ಬೆಂಬಲದೊಂದಿಗೆ ಜಿಲ್ಲೆಯಲ್ಲಿ ಅದ್ಭುತವಾದ ಸಾಧನೆ ಮಾಡಲಾಗಿದೆ” ಎಂದರು.

“ದೀಪ ಮಾತನಾಡುವುದಿಲ್ಲ, ಬೆಳಕನ್ನು ಮಾತ್ರ ನೀಡುತ್ತದೆ. ದೀಪದೊಳಗಿರುವ ಎಣ್ಣೆ ಹಾಗೂ ಬತ್ತಿ ಉರಿದು ಬೆಳಕು ನೀಡುತ್ತದೆ. ಎಷ್ಟೇ ಸಮಸ್ಯೆ ಬಂದರೂ ನಿಮ್ಮ ಬದುಕು ಬದಲಿಸಬೇಕು ಎಂದು ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ 90% ಜನರಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಹಸಿದವರಿಗೆ ಅನ್ನ, ಮಹಿಳೆಯರಿಗೆ 2 ಸಾವಿರ ಆರ್ಥಿಕ ನೆರವು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ” ಎಂದು ಹೇಳಿದರು.

“ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಲೆ ಏರಿಕೆ ಗಗನಕ್ಕೆ ಏರಿ, ಆದಾಯ ಪಾತಾಳಕ್ಕೆ ಕುಸಿದು ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಅವರ ಬದುಕು ರಕ್ಷಣೆಗೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಈ ಯೋಜನೆ ಜಾರಿಗೆ ಅನುಮೋದನೆ ನೀಡಲಾಯಿತು” ಎಂದರು.

“ಹಸಿದವನಿಗೆ ಅನ್ನದ ಬೆಲೆ, ಕಷ್ಟ ಅನುಭವಿಸದವನಿಗೆ ತಾಳ್ಮೆ ಬೆಲೆ ತಿಳಿಯುತ್ತದೆ. ಸೋತವನಿಗೆ ಗೆಲುವಿನ ದಾರಿ ತಿಳಿಯುತ್ತದೆ. ಅದೇ ರೀತಿ ಕಳೆದ ಸರ್ಕಾರದಲ್ಲಿ ಜನ ಅನುಭವಿಸಿದ ಕಷ್ಟ ನೋಡಿ ನಾವು ಈ ಯೋಜನೆಗಳನ್ನು ನೀಡಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪುಟಾಣಿ ಮಕ್ಕಳಿಂದ ವೃದ್ಧಾರವರೆಗೆ ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ನೀಡುತ್ತಾ ಬಂದಿದೆ. ಬಿಜೆಪಿ ಸರ್ಕಾರ ಯಾವುದಾದರೂ ಒಂದು ಇಂತಹ ಕಾರ್ಯಕ್ರಮ ನೀಡಿತ್ತಾ?” ಎಂದು ಪ್ರಶ್ನಿಸಿದರು.

“ಕೇಂದ್ರದಲ್ಲಿ ಯುಪಿಎ ಸರ್ಕಾರ ಶಿಕ್ಷಣದ ಹಕ್ಕು, ಆಹಾರ ಭದ್ರತೆ, ಮಾಹಿತಿ ಹಕ್ಕು, ಉದ್ಯೋಗ ಖಾತರಿ ಯೋಜನೆಗಳನ್ನು ನೀಡಿದೆ. ಇದೆಲ್ಲವೂ ಜನರಿಗಾಗಿ ಮಾಡಿದ ಯೋಜನೆ. ರಾಜ್ಯವನ್ನು ಪೋಡಿ ಸಮಸ್ಯೆ ಮುಕ್ತರಾಜ್ಯ ಮಾಡಲು ಕಂದಾಯ ಇಲಾಖೆಯಲ್ಲಿ ವಿಭಿನ್ನ ಯೋಜನೆ ರೂಪಿಸಲಾಗಿದೆ. ನೀವು ಕೊಟ್ಟ ಶಕ್ತಿಯಿಂದ ನಮ್ಮ ಸರ್ಕಾರ ಉತ್ತಮ ಆಡಳಿತಕ್ಕೆ ಮಾದರಿಯಾಗಿದೆ. ಕಾಂಗ್ರೆಸ್ ಪಕ್ಷ ಜನಪರ ಯೋಜನೆಗಳ ಜತೆಗೆ ಸಂವಿಧಾನ ನೀಡಿದೆ, ಆಮೂಲಕ ಜನರಿಗೆ ಶಕ್ತಿ, ರಕ್ಷಣೆ ನೀಡಿದೆ” ಎಂದರು.

“4 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಿ ಸರ್ವರಿಗೂ ಸಮಬಾಳು, ಸಮಪಾಲು ಎಂಬ ಧ್ಯೆಯದೊಂದಿಗೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದರು.

“ಬಿಜೆಪಿ ಹಾಗೂ ದಳದವರಿಗೆ ನಿಮ್ಮ ಸಾಕ್ಷಿಗುಡ್ಡೆ ಏನು ಎಂದು ಕೇಳುತ್ತಿದ್ದೇನೆ. ತರು, ಮಹಿಳೆಯರು, ಯುವಕರ ಬದುಕಿಗಾಗಿ ಏನು ಮಾಡಿದ್ದೀರಿ? ನಿಮಗೆ ಅಸೂಯೆ ಹೆಚ್ಚಾಗಿದೆ. ಹೀಗಾಗಿ ಏನಾದರೂ ಮಾಡಿ ಈ ಸರ್ಕಾರ ತೆಗೆಯಬೇಕು ಎಂದು ಕೇಂದ್ರ ಸಚಿವರು ಕನಸು ಕಾಣುತ್ತಿದ್ದಾರೆ. ಅದಕ್ಕಾಗಿ ಇಬ್ಬರೂ ಜೋಡಿಯಾಗಿದ್ದಾರೆ. ಇನ್ನೂ ನಾಲ್ಕು ಜನ ಸೇರಿ ಜೋಡಿಯಾಗಲಿ. 2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದು ಸವಾಲು ಹಾಕಿದರು.

ವಿರೋಧ ಪಕ್ಷದವರು ಯಾರಿಗೋಸ್ಕರ ಹೋರಾಟ ಮಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು. ದನ ಕಾರುಗಳ ಮೇವು, ಇಂಡಿ, ಬೂಸಾ ಬೆಲೆ ಹೆಚ್ಚಾಗಿದೆ ಎಂದು ರೈತರು ಕಂಗಾಲಾಗಿದ್ದರು. ಅವರಿಗೆ ನೆರವಾಗಲು ನಮ್ಮ ಸರ್ಕಾರ ಹಾಲಿನ ಬೆಲೆ ಏರಿಕೆ ಮಾಡಿದೆ. ನಮ್ಮ ರಾಜ್ಯದಲ್ಲಿ ಬೆಲೆ ಏರಿಕೆಯಾದರೂ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲೇ ಹಾಲಿನ ಬೆಲೆ ಕಡಿಮೆ ಇದೆ. ರೈತರ ನೆರವಿಗೆ ಧಾವಿಸಿದ ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ. ಆಮೂಲಕ ಬಿಜೆಪಿ ರೈತರ ವಿರುದ್ಧ ಹೋರಾಟ ಮಾಡುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT