ಬಾಗಲಕೋಟೆ ರೈತ ಶ್ರೀಶೈಲ ತೇಲಿ 
ರಾಜ್ಯ

40 ಡಿಗ್ರಿ ಬಿಸಿಲಿನಲ್ಲೂ ಸೇಬು ಬೆಳೆದು ಬಾಗಲಕೋಟೆ ರೈತ ಸಾಧನೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಪ್ರಶಂಸೆ

ಶ್ರೀಶೈಲ ತೇಲಿ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದವರು.

ಬಾಗಲಕೋಟೆ: ಶೀತ ವಾತಾವರಣವಿರುವ ಕಾಶ್ಮೀರ ಹಾಗೂ ಹಿಮಾಚಲಪ್ರದೇಶದಲ್ಲಿ ಬೆಳೆಯಲಾಗುವ ಸೇಬನ್ನು ಬಿಸಿಲನಾಡು ಬಾಗಲಕೋಟೆಯಲ್ಲಿ ಬೆಳೆದು ಸಾಧನೆ ಮಾಡಿದ ರೈತನ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಮನ್ ಕಿ ಬಾತ್ ನಲ್ಲಿ ಮೋದಿಯವರು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ರೈತ ಶ್ರೀಶೈಲ ತೇಲಿ ಅವರ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಶ್ರೀಶೈಲ ತೇಲಿ ಅವರು ಸೇಬು ಬೆಳೆದ ರೀತಿ ಹಾಗೂ ಪರಿಶ್ರಮವನ್ನು ಕೊಂಡಾಡಿ ಮೋದಿ ಅವರು, ಮೊದಲೆಲ್ಲ ಶೀತವಲಯದಲ್ಲಿ ಸೇಬು ಬೆಳೆಯಲಾಗುತ್ತಿತ್ತು. ಆದರೆ, ಕರ್ನಾಟಕದ ಉಷ್ಣವಲಯದಲ್ಲೂ ಸೇಬು ಬೆಳೆದಿದ್ದು ಗಮನಾರ್ಹವಾಗಿದೆ. 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರುವ ಪ್ರದೇಶದಲ್ಲಿ ಸೇಬು ಬೆಳೆದು ಲಾಭ ಪಡೆದ ರೈತನ ಯಶೋಗಾಥೆ ಮಾದರಿ ಎಂದು ಹೇಳಿದರು.

ಶ್ರೀಶೈಲ ತೇಲಿ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದವರು. ಕೆಲ ವರ್ಷ ಗಳ ಹಿಂದೆ ಕುಳಲಿ ಗ್ರಾಮದ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ ಸೇಬು ಕೃಷಿ ಮಾಡಿ ಭರ್ಜರಿ ಫಸಲು ತೆಗೆದಿದ್ದಾರೆ. 7 ಎಕರೆ ಜಮೀನಿನಲ್ಲಿ 2620 ಸಸಿ ನಾಟಿ ಮಾಡಿದ್ದು, ಸಸಿಗಳ ಆರೈಕೆಗೆ ಜೀವಾಮೃತ, ಸಾವಯವ ಗೊಬ್ಬರ ಬಳಕೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT