ಸಾಂದರ್ಭಿಕ ಚಿತ್ರ 
ರಾಜ್ಯ

ಕಂಟೇನರ್ ಗೆ ಕಾರು ಡಿಕ್ಕಿ: ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಐವರು ಸಾವು

ಕಾಣಿಪಾಕಂ ಸಮೀಪದ ತೋತಾಪಲ್ಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಿರುಪತಿ: ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಕಾಣಿಪಾಕಂ ಸಮೀಪದ ತೋತಾಪಲ್ಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.

ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಎರಿಟಿಗಾ ಕಾರು, ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT