ಸಂತೋಷ್ ಲಾಡ್ 
ರಾಜ್ಯ

ಪಾಕಿಸ್ತಾನಕ್ಕೆ ನೀರು ಹೋಗುತ್ತಿಲ್ಲ ಎಂದು ಯಾವುದೋ ಕೆರೆ ತೋರಿಸುತ್ತಿದ್ದಾರೆ: ಸಂತೋಷ್ ಲಾಡ್ ವ್ಯಂಗ್ಯ

ಆ ತಂತ್ರಜ್ಞಾನ, ಈ ತಂತ್ರಜ್ಞಾನ, ಎಐ ತಂತ್ರಜ್ಞಾನ ಎಂದು ಮೋದಿ ಹೇಳುತ್ತಾರೆ. ಆದರೆ, ಕಾಶ್ಮೀರದಲ್ಲಿ ಒಂದು ಡ್ರೋನ್‌ ಕೂಡ ಇಲ್ಲ ಎಂದರು. ಪುಲ್ವಾಮಾ ದಾಳಿ ಬಗ್ಗೆ ಬಿಜೆಪಿಯವರು ಯಾರೂ ಈಗ ಮಾತನಾಡುತ್ತಿಲ್ಲ.

ಬೆಂಗಳೂರು: ಪಹಲ್ಗಾಮ್‌ ದಾಳಿಯ ಬಳಿಕ ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ಧ್ವಂಸ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ, ಉಗ್ರರ ಮನೆ ಅಲ್ಲಿ ಇದ್ದದ್ದು ಗೊತ್ತಿರಲಿಲ್ಲವೇ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರು ನಿಲ್ಲಿಸಲು ಸಾಧ್ಯ ಇದ್ಯಾ? ಇದರ ಬಗ್ಗೆ ಪರಾಮರ್ಶೆ ಆಗಿದ್ಯಾ? ಸರ್ಕಾರ ನಿರ್ಣಯ ತೆಗೆದುಕೊಳ್ಳುವ ಮೊದಲು ಮಾಧ್ಯಮಕ್ಕೆ ಸುದ್ದಿ ಬಿಡುತ್ತಾರೆ. ವಾಸ್ತವ ವಿಷಯವನ್ನು ದಾರಿ ತಪ್ಪಿಸಲು ಇಂತಹ ವಿಚಾರ ಚರ್ಚೆಗೆ ಬರುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಯುದ್ಧ ಆರಂಭವಾಗಲಿದೆ. ಫೈಟರ್ ಜೆಟ್ ಸಿದ್ಧವಾಗಿದೆ ಎಂದೂ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ. ಪಾಕಿಸ್ತಾನಕ್ಕೆ ನೀರು ಹೋಗುತ್ತಿಲ್ಲ ಎಂದು ಯಾವುದೊ ಕೆರೆ ನೀರು ತೋರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಆ ತಂತ್ರಜ್ಞಾನ, ಈ ತಂತ್ರಜ್ಞಾನ, ಎಐ ತಂತ್ರಜ್ಞಾನ ಎಂದು ಮೋದಿ ಹೇಳುತ್ತಾರೆ. ಆದರೆ, ಕಾಶ್ಮೀರದಲ್ಲಿ ಒಂದು ಡ್ರೋನ್‌ ಕೂಡ ಇಲ್ಲ ಎಂದರು. ಪುಲ್ವಾಮಾ ದಾಳಿ ಬಗ್ಗೆ ಬಿಜೆಪಿಯವರು ಯಾರೂ ಈಗ ಮಾತನಾಡುತ್ತಿಲ್ಲ. ಪಹಲ್ಗಾಮ್‌ ದಾಳಿ ಮುಂದಿಟ್ಟು ಮುಂಬರುವ ಬಿಹಾರ ಚುನಾವಣೆ ಎದುರಿಸಲು ಬಿಜೆಪಿಯವರು ಹೊರಟಿದ್ದಾರೆ ಎಂದೂ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT