ಲಾಯರ್ ಜಗದೀಶ್ 
ರಾಜ್ಯ

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ

ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ.

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ.

ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು. ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ.

ಈ ಬಗ್ಗೆ ಲಾಯರ್‌ ಜಗದೀಶ್‌ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, ತಮಗೆ ಜಾಮೀನು ಸಿಕ್ಕಿರುವುದಾಗಿ ಹೇಳಿದ್ದಾರೆ. ನಾನು ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ಎಂದಿರುವ ಜಗದೀಶ್‌, PSI ಹಗರಣವನ್ನು ಬಯಲು ಮಾಡಿದ್ದು, ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಸೆಕ್ಸ್ ಸ್ಕ್ಯಾಂಡಲ್‌ನ್ನು ಬಹಿರಂಗಪಡಿಸಿದ್ದು , ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು , ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು , ಕೊಡಿಗೆಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ಧು ... ಇವೆಲ್ಲವೂ ನನ್ನ ಹೋರಾಟದ ಭಾಗ.

ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳೀಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT