ಸಾಂದರ್ಭಿಕ ಚಿತ್ರ 
ರಾಜ್ಯ

'ಎಣ್ಣೆ' ಪ್ರಿಯರಿಗೆ ಶಾಕಿಂಗ್ ಸುದ್ದಿ: ಮತ್ತೆ ಮದ್ಯದ ಬೆಲೆ ಏರಿಕೆಗೆ ಸರ್ಕಾರ ಅಧಿಸೂಚನೆ?

ಮುಖ್ಯಮಂತ್ರಿಗಳು ಅಬಕಾರಿ ಇಲಾಖೆಗೆ 40,000 ಕೋಟಿ ರೂ.ಗಳ ಅಬಕಾರಿ ಸುಂಕ ಸಂಗ್ರಹ ಗುರಿ ನಿಗದಿಪಡಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಮದ್ಯದ ಬೆಲೆಗಳನ್ನು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ.

ಬೆಂಗಳೂರು: ಡೀಸೆಲ್ ತೆರಿಗೆ, ವಿದ್ಯುತ್ ಸುಂಕ ಮತ್ತು ಹಾಲಿನ ಬೆಲೆಗಳನ್ನು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಸರ್ಕಾರ ಈಗ ಮದ್ಯದ ಬೆಲೆಗಳನ್ನು ಹೆಚ್ಚಿಸಲು ನಿರ್ಧರಿಸಿದೆ.

ಕರ್ನಾಟಕದಲ್ಲಿ ಮದ್ಯದ ಬೆಲೆ ದುಬಾರಿ ಆಗಿರುವಾಗಲೇ ಮದ್ಯದ ಬೆಲೆಯನ್ನು ಪ್ರತಿ ತ್ರೈಮಾಸಿಕಕ್ಕೆ (ಪ್ರತಿ ಮೂರು ತಿಂಗಳು)10 ರೂಪಾಯಿ ಯಿಂದ 15 ರೂಪಾಯಿ ಹೆಚ್ಚಳ ಹಾಗೂ ಬಿಯರ್‌ ಬೆಲೆಯನ್ನು ಈಗ ಇರುವ ಬೆಲೆಗಿಂತ ಶೇ.10% ರಷ್ಟು ಹೆಚ್ಚಳ ಮಾಡಲು ಭರ್ಜರಿ ಸಿದ್ಧತೆ ಶುರುವಾಗಿದೆ

ಮುಖ್ಯಮಂತ್ರಿಗಳು ಅಬಕಾರಿ ಇಲಾಖೆಗೆ 40,000 ಕೋಟಿ ರೂ.ಗಳ ಅಬಕಾರಿ ಸುಂಕ ಸಂಗ್ರಹ ಗುರಿ ನಿಗದಿಪಡಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಮದ್ಯದ ಬೆಲೆಗಳನ್ನು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಮದ್ಯದ ಬೆಲೆಯನ್ನು ಸ್ಪರ್ಧಾತ್ಮಕವಾಗಿ ನಿಗದಿಪಡಿಸುವುದು ಸಹ ಪ್ರಸ್ತಾವನೆಯಲ್ಲಿದೆ.

ಅಬಕಾರಿ ಇಲಾಖೆ ಮಂಗಳವಾರ ಅಧಿಸೂಚನೆ ಹೊರಡಿಸಿದ್ದು, ನಾಗರಿಕರಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಿದೆ. ಸರ್ಕಾರದ ಹೊಸ ಅಧಿಸೂಚನೆಯ ಅನ್ವಯ, ವಿಸ್ಕಿ, ಜಿನ್ ಹಾಗೂ ರಮ್ ಸೇರಿದಂತೆ ವಿವಿಧ ಮದ್ಯಗಳ ಬೆಲೆ ಏರಿಕೆಯಾಗಲಿದೆ. ಈ ಮದ್ಯದ ಬೆಲೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ 10 ರೂಪಾಯಿ ಯಿಂದ 15 ರೂಪಾಯಿ ಹೆಚ್ಚಳ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಇದರಲ್ಲಿ ಬಿಯರ್, ಟಾಡಿ ಹಾಗೂ ವೈನ್ ಮದ್ಯಗಳನ್ನು ಸೇರಿಸಿಲ್ಲ.

ಆದಾಗ್ಯೂ, ದುಬಾರಿ ದರದ ಮದ್ಯಗಳ ಸಹವಾಸಕ್ಕೆ ಹೋಗಿಲ್ಲ್ಲ. "ಎಲ್ಲಾ ವಿಭಾಗಗಳಲ್ಲಿ ಬಿಯರ್ ದರವನ್ನು ಶೇ. 10 ರಷ್ಟು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಮದ್ಯದ ಮಾರಾಟ ಹೆಚ್ಚಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ನೆರೆಹೊರೆಯ ರಾಜ್ಯಗಳು ಕರ್ನಾಟಕದ ಮದ್ಯವನ್ನು ಮಾರಾಟ ಮಾಡಲು ಅವಕಾಶ ನೀಡುತ್ತಿಲ್ಲ, ಆದರೆ ತಮ್ಮ ರಾಜ್ಯಗಳಿಂದ ಕರ್ನಾಟಕಕ್ಕೆ ಬಾಟಲಿಗಳನ್ನು ಸಾಗಿಸಲು ಅವಕಾಶ ನೀಡಲು ಉತ್ಸುಕವಾಗಿವೆ. ಹೀಗಾಗಿ ಇತರ ರಾಜ್ಯಗಳಿಗೆ ಸಮನಾಗಿ ಬೆಲೆ ಏರಿಕೆಯನ್ನು ಪ್ರಸ್ತಾಪಿಸಲಾಗಿದೆ. ಇದು ಸರ್ಕಾರಕ್ಕೆ ಉತ್ತಮ ಆದಾಯದ ಮೂಲವಾಗಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!