ಸಾಂದರ್ಭಿಕ ಚಿತ್ರ  
ರಾಜ್ಯ

ಬೇಸಿಗೆ ರಜೆ: ಬೆಂಗಳೂರಿನಿಂದ ಮಧುರೈ, ವಿಜಯಪುರ, ಬೆಳಗಾವಿಗೆ ವಿಶೇಷ ರೈಲು ಸೇವೆ

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗಲ್ ಮತ್ತು ಕೊಡೈಕೆನಾಲ್ ರಸ್ತೆ ನಿಲುಗಡೆ ಹೊಂದಿವೆ.

ಬೆಂಗಳೂರು: ಈಗ ಬೇಸಿಗೆ ರಜೆ ಹಿನ್ನೆಲೆ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹಲವು ವಿಶೇಷ ರೈಲುಗಳ ಸಂಚಾರಕ್ಕೆ ಮುಂದಾಗಿದೆ. ಬೆಂಗಳೂರು ಟು ಮಧುರೈ, ಯಶವಂತಪುರ ಟು ವಿಜಯಪುರ ಮತ್ತು ಬೆಂಗಳೂರು ಟು ಬೆಳಗಾವಿ ಮಧ್ಯೆ ಈ ವಿಶೇಷ ರೈಲುಗಳು ಸಂಚರಿಸಲಿವೆ.

ಬೆಂಗಳೂರು ಟು ಮಧುರೈ

ರೈಲು ಸಂಖ್ಯೆ 06521: ಎಸ್​ಎಂವಿಟಿ ಬೆಂಗಳೂರು ಟು ಮಧುರೈ ವಿಶೇಷ ಎಕ್ಸ್‌ಪ್ರೆಸ್ ರೈಲು​ ಏಪ್ರಿಲ್ 30 ​ ರಂದು SMVT ಬೆಂಗಳೂರಿನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 06:15 ಗಂಟೆಗೆ ಮಧುರೈ ತಲುಪಲಿದೆ.

ರೈಲು ಸಂಖ್ಯೆ 06522: ಮಧುರೈ ಟು ಎಸ್​ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಮೇ 1 ರಂದು ಮಧುರೈನಿಂದ ಬೆಳಿಗ್ಗೆ 09:10 ಗಂಟೆಗೆ ಹೊರಟು ಅದೇ ದಿನ ಸಂಜೆ 7:50 ಗಂಟೆಗೆ ಬೆಂಗಳೂರು ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗಲ್ ಮತ್ತು ಕೊಡೈಕೆನಾಲ್ ರಸ್ತೆ ನಿಲುಗಡೆ ಹೊಂದಿವೆ.

ಯಶವಂತಪುರ ಟು ವಿಜಯಪುರ

ರೈಲು ಸಂಖ್ಯೆ 06561: ಯಶವಂತಪುರ-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 30 ರಂದು ಯಶವಂತಪುರದಿಂದ ರಾತ್ರಿ 10 ಗಂಟೆಗೆ ಹೊರಟು, ಮರುದಿನ ಮಧ್ಯ 02:05 ಗಂಟೆಗೆ ವಿಜಯಪುರ ತಲುಪುತ್ತದೆ.

ರೈಲು ಸಂಖ್ಯೆ 06562: ವಿಜಯಪುರ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್​ ರೈಲು ವಿಜಯಪುರದಿಂದ ಮೇ 1ರಂದು ಸಂಜೆ 07 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 11:15 ಗಂಟೆಗೆ ಯಶವಂತಪುರಕ್ಕೆ ಆಗಮಿಸಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿಯಲ್ಲಿ ನಿಲುಗಡೆ ಹೊಂದಿವೆ.

ಬೆಂಗಳೂರು ಟು ಬೆಳಗಾವಿ

ರೈಲು ಸಂಖ್ಯೆ 06551: SMVT ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 30 ಮತ್ತು ಮೇ 2ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 07:30 ಗಂಟೆಗೆ ಬೆಳಗಾವಿಗೆ ತಲುಪಲಿದೆ.

ರೈಲು ಸಂಖ್ಯೆ 06552: ಬೆಳಗಾವಿ-SMVT ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಬೆಳಗಾವಿಯಿಂದ ಮೇ 1ರಂದು ಮತ್ತು ಮೇ 3ರಂದು ಸಂಜೆ 05:30 ಗಂಟೆಗೆ ಹೊರಟು ಮರುದಿನ ಸಂಜೆ 04:30 ಗಂಟೆಗೆ SMVT ಬೆಂಗಳೂರಿಗೆ ಆಗಮಿಸಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರದಲ್ಲಿ ನಿಲುಗಡೆ ಹೊಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT