ಬಂಧಿತ ಆರೋಪಿಗಳಿಂದ ಚಿನ್ನಾಭರಣ ವಶ 
ರಾಜ್ಯ

ಬೆಂಗಳೂರು: ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಪುರುಷರ ವೇಷದಲ್ಲಿ ಕಳ್ಳತನ; ಆಟೋರಿಕ್ಷಾ ಚಾಲಕಿ ಸೇರಿ ಇಬ್ಬರು ಮಹಿಳೆಯರ ಬಂಧನ

ಆಟೋ ಚಾಲಕಿ ಬೀಗ ಹಾಕಿದ ಮನೆಗಳನ್ನು ಹುಡುಕುತ್ತಾ ಓಡಾಡುತ್ತಿದ್ದಳು. ಮನೆಯನ್ನು ಆಯ್ಕೆ ಮಾಡಿದ ನಂತರ, ಅವಳು ತನ್ನ ಪಾರ್ಟನರ್ ಜೊತೆ ಸೇರಿ ಕಳ್ಳತನ ಮಾಡುತ್ತಿದ್ದಳು.

ಬೆಂಗಳೂರು: ಬೆಂಗಳೂರು: ಸರಣಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಮ್ಮನಹಳ್ಳಿ ಪೊಲೀಸರು ಆಟೋರಿಕ್ಷಾ ಚಾಲಕಿ ಸೇರಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

ಬೀಗ ಹಾಕಿದ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆಟೋರಿಕ್ಷಾ ಚಾಲಕಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಡಿ.ಜೆ.ಹಳ್ಳಿಯ ಶಬರೀನ್‌ ತಾಜ್‌ (38), ನೀಲಂ (22) ಬಂಧಿತರು.

ಇಬ್ಬರೂ ಆರೋಪಿಗಳು ಕಳೆದ ಎರಡು ವರ್ಷಗಳಿಂದ ಸಕ್ರಿಯರಾಗಿದ್ದರು. ಆಟೋ ಚಾಲಕಿ ಬೀಗ ಹಾಕಿದ ಮನೆಗಳನ್ನು ಹುಡುಕುತ್ತಾ ಓಡಾಡುತ್ತಿದ್ದಳು. ಮನೆಯನ್ನು ಆಯ್ಕೆ ಮಾಡಿದ ನಂತರ, ಅವಳು ತನ್ನ ಪಾರ್ಟನರ್ ಜೊತೆ ಸೇರಿ ಕಳ್ಳತನ ಮಾಡುತ್ತಿದ್ದಳು. ಇಬ್ಬರಿಂದ 11 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಬೊಮ್ಮನಹಳ್ಳಿ ಮತ್ತು ಮೈಕೊ ಲೇಔಟ್ ಪೊಲೀಸ್ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದಾರೆ. ಅವರು ಕದ್ದ ಚಿನ್ನಾಭರಣಗಳನ್ನು ಡಿಜೆ ಹಳ್ಳಿ ಮತ್ತು ಟ್ಯಾನರಿ ರಸ್ತೆಯಲ್ಲಿರುವ ಆಭರಣ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು, ಆರೋಪಿಗಳಿಂದ ಸುಮಾರು 130 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಮಹಿಳೆಯರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅಪರಾಧಕ್ಕೆ ಬಳಸಲಾಗಿದ್ದ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳು ಗಾರ್ವೆಭಾವಿಪಾಳ್ಯದ ಮನೆಯೊಂದರಲ್ಲಿ ಮಾ.17ರಂದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಯಿತು.

ಏಪ್ರಿಲ್ 2 ರಂದು ಆಡುಗೋಡಿ ಟ್ರಾಫಿಕ್ ಸಿಗ್ನಲ್ ಬಳಿ ಇಬ್ಬರನ್ನು ಬಂಧಿಸಲಾಯಿತು. ಅವರನ್ನು ಒಂಬತ್ತು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ಅವರ ಮಾಹಿತಿಯ ಆಧಾರದ ಮೇಲೆ, ಆರೋಪಿಗಳು ಮಾರಾಟ ಮಾಡಿದ್ದ ಚಿನ್ನಾಭರಣಗಳನ್ನು ಹಿಂದಿರುಗಿಸುವಂತೆ ಆಭರಣ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT