ಪ್ರಜ್ವಲ್ ರೇವಣ್ಣ ಮತ್ತು ನಟಿ ರಮ್ಯ 
ರಾಜ್ಯ

ಅತ್ಯಾಚಾರ ಪ್ರಕರಣ: Prajwal Revanna ದೋಷಿ ಎಂದು ಕೋರ್ಟ್ ತೀರ್ಪು; Ramya ಹೇಳಿದ್ದೇನು?

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ.

ಬೆಂಗಳೂರು: ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜನಪ್ರತಿನಿಧಿಗಳ ಕೋರ್ಟ್ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡುತ್ತಲೇ ಈ ಕುರಿತು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ತೀರ್ಪು ಪ್ರಕಟಿಸಿದೆ.

ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ. ಅಲ್ಲದೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಘೋಷಿಸಿದೆ.

ನಟ ರಮ್ಯಾ ಪ್ರತಿಕ್ರಿಯೆ

ಇನ್ನು ಅತ್ತ ಕೋರ್ಟ್ ಪ್ರಜ್ವಲೇ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸುತ್ತಲೇ ಇತ್ತ ನಟಿ ಹಾಗೂ ಮಂಡ್ಯದ ಮಾಜಿ ಸಂಸದೆ ರಮ್ಯಾ ಈ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ನಟಿ ರಮ್ಯಾ, 'Well done HC! Justice served for all the women! (ಕೋರ್ಟ್ ತೀರ್ಪು ಶ್ಲಾಘನೀಯ.. ಎಲ್ಲ ಸಂತ್ರಸ್ಥ ಮಹಿಳೆಯರಿಗೆ ನ್ಯಾಯ ದೊರೆತಿದೆ) ಎಂದು ಸತೀಶ್ ಆಚಾರ್ಯ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಅಂತೆಯೇ ಇದೇ ವಿಚಾರವಾಗಿ ರಾಷ್ಟ್ರೀಯ ವಾಹಿನಿಯೊಂದಿಗೆ ಮಾತನಾಡಿರುವ ಮತ್ತೋರ್ವ ಕಾಂಗ್ರೆಸ್ ನಾಯಕಿ ಲಾವಣ್ಯ ಬಲ್ಲಾಳ್ ಜೈನ್, 'ಕೋರ್ಟ್ ನ ಈ ತೀರ್ಪು ಅತ್ಯಂತ ಮಹತ್ವದ್ದಾಗಿದ್ದು, ಇದು ಬಹಳಷ್ಟು ಮಹಿಳೆಯರು ಧೈರ್ಯವಾಗಿ ಮಾತನಾಡಲು ಮತ್ತು ನ್ಯಾಯವನ್ನು ಪಡೆಯಲು ಪ್ರೋತ್ಸಾಹಿಸುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್