ಜಾರಿ ನಿರ್ದೇಶನಾಲಯ 
ರಾಜ್ಯ

ವಂಚನೆ ಪ್ರಕರಣ: ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇ.ಡಿ ದಾಳಿ; ಮುಂಬೈನಲ್ಲೂ ಶೋಧ

ಕಂಪನಿಯು ಯೋಜನೆಯನ್ನು ಹಸ್ತಾಂತರಿಸುವಲ್ಲಿ 'ವಿಫಲವಾಗಿದೆ' ಮತ್ತು ಖರೀದಿದಾರರಿಗೆ ಹಣವನ್ನು ಹಿಂದಿರುಗಿಸಿಲ್ಲ ಎಂದು ಆರೋಪಿಸಲಾಗಿದೆ.

ಬೆಂಗಳೂರು: ಫ್ಲಾಟ್‌ಗಳನ್ನು ಮಾರಾಟ ಮಾಡುವ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಯನ್ನು ಮನೆ ಖರೀದಿದಾರರಿಗೆ ವಂಚಿಸಿದ ಆರೋಪ ಹೊತ್ತಿರುವ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ನಡೆಸಿದ್ದು, ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬೆಂಗಳೂರು ಮತ್ತು ಮುಂಬೈನಲ್ಲಿ ಓಝೋನ್ ಅರ್ಬಾನಾ ಡೆವಲಪರ್ಸ್ ಪ್ರೈ.ಲಿ.ಗೆ ಸೇರಿದ ಕನಿಷ್ಠ ಹತ್ತು ಆವರಣಗಳು ಮತ್ತು ಅದರ ಪ್ರಮುಖ ನಿರ್ವಹಣಾ ಸಿಬ್ಬಂದಿ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸತ್ಯಮೂರ್ತಿ ವಾಸುದೇವನ್ ಈ ಗುಂಪಿನ ಪ್ರಮೋಟರ್ ಆಗಿದ್ದಾರೆ.

ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಓಝೋನ್ ಅರ್ಬಾನ ಎಂಬ ಕಂಪನಿ ಮತ್ತು ಅದರ ಪ್ರಮೋಟರ್ಸ್ ವಿರುದ್ಧ ದಾಖಲಾಗಿರುವ ಹಲವಾರು ಪೊಲೀಸ್ ಎಫ್‌ಐಆರ್‌ಗಳ ಆಧಾರದ ಮೇಲೆ ಇಡಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿದೆ.

ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯನ್ನು 2018 ರಲ್ಲಿ ಖರೀದಿದಾರರಿಗೆ ಹಸ್ತಾಂತರಿಸಬೇಕಿತ್ತು. ಆದರೆ, 2024 ರವರೆಗೆ ಯೋಜನೆಯು ಕೇವಲ ಶೇ 49 ರಷ್ಟು ಮಾತ್ರ ಪೂರ್ಣಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಯು ಯೋಜನೆಯನ್ನು ಹಸ್ತಾಂತರಿಸುವಲ್ಲಿ 'ವಿಫಲವಾಗಿದೆ' ಮತ್ತು ಖರೀದಿದಾರರಿಗೆ ಹಣವನ್ನು ಹಿಂದಿರುಗಿಸಿಲ್ಲ ಎಂದು ಆರೋಪಿಸಲಾಗಿದೆ.

ಆರೋಪಿ ಕಂಪನಿ ಮತ್ತು ಅದರ ಪ್ರಮುಖ ನಿರ್ವಹಣಾ ಸಿಬ್ಬಂದಿ, ಯೋಜನೆ ಪೂರ್ಣಗೊಳ್ಳುವವರೆಗೆ ಮನೆ ಖರೀದಿದಾರರ ಬ್ಯಾಂಕ್ ಇಎಂಐ (ಮನೆ ಖರೀದಿಗೆ ತೆಗೆದುಕೊಂಡ) ಅನ್ನು ತಾನೇ ಪಾವತಿಸುವುದಾಗಿ ಭರವಸೆ ನೀಡುವ ಮೂಲಕ 'ವಂಚಿಸಿದ್ದಾರೆ' ಎಂದು ಆರೋಪಿಸಲಾಗಿದೆ.

ಬುಕಿಂಗ್ ಮಾಡುವಾಗ ಪೂರ್ಣ ಮೊತ್ತವನ್ನು ಮುಂಗಡವಾಗಿ ಪಾವತಿಸಿದರೆ ಭಾರಿ ರಿಯಾಯಿತಿ ನೀಡಲಾಗುವುದು ಎಂದು ಕಂಪನಿಯು ಅನೇಕ ಖರೀದಿದಾರರಿಗೆ ಭರವಸೆ ನೀಡಿತು ಮತ್ತು ಅದು ಅವರನ್ನು "ಮರುಖರೀದಿ ಯೋಜನೆ"ಯೊಂದಿಗೆ ಆಕರ್ಷಿಸಿತು ಎಂದು ಆರೋಪಿಸಲಾಗಿದೆ.

ಕಂಪನಿಯ ನಿರ್ದೇಶಕರು ಅದರ ಖರೀದಿದಾರರಿಗೆ ಸಾಮೂಹಿಕವಾಗಿ ನೂರಾರು ಕೋಟಿಗಳಷ್ಟು ವಂಚಿಸಿದ್ದಾರೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ED ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT