ಸಂಗ್ರಹ ಚಿತ್ರ 
ರಾಜ್ಯ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ.

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಗುರುತಿಸುವ ಉಪಕ್ರಮದ ಭಾಗವಾಗಿ, ಮಾನದಂಡಗಳ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಐದು ಸದಸ್ಯರ ಸಮಿತಿಯನ್ನು ರಚಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ.

ಸಮಿತಿಯಲ್ಲಿ ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್, ಉಪ ಕಾರ್ಯದರ್ಶಿ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ ಶೆಟ್ಟಿ ಸದಸ್ಯರಾಗಿದ್ದಾರೆ.

ಆಂಧ್ರಪ್ರದೇಶ ಸರ್ಕಾರ ಮತ್ತೊಂದು ಪ್ರಾದೇಶಿಕ ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದ್ದು. ಈ ಬಗ್ಗೆ ಅಲ್ಲಿ ಅಳವಡಿಸಿಕೊಳ್ಳಳಾಗಿರುವ ಮಾನದಂಡಗಳು, ಕಾರ್ಯವಿಧಾನದ ಚೌಕಟ್ಟನ್ನು ಸಮಿತಿ ಅಧ್ಯಯನ ನಡೆಸಲಿದೆ.

ಸರ್ಕಾರ ಈ ಹಿಂದೆ ಆಂಧ್ರಪ್ರದೇಶ ಭಾಷ ನೀತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿತ್ತು. ಇದೀಗ ಆಂಧ್ರಪ್ರದೇಶವು ಎರಡನೇ ಅಧಿಕೃತ ಭಾಷೆಯ ಸ್ಥಾನಮಾನವನ್ನು ಹೇಗೆ ಜಾರಿಗೆ ತಂದಿದೆ ಎಂಬುದರ ಕುರಿತು ಸಮಗ್ರ ತಿಳುವಳಿಕೆಯನ್ನು ಪಡೆಯಲು ಬಯಸಿದ್ದು, ಅದರ ವ್ಯಾಪ್ತಿ, ರೂಪ ಮತ್ತು ಕಾನೂನು ಮಾನ್ಯತೆ ಸೇರಿದಂತೆ ಇತರೆ ವಿಚಾರಗಳ ಕುರಿತು ಅಧ್ಯಯನ ನಡೆಸಿ, ಮೂರು ತಿಂಗಳೊಳಗೆ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

ಸಿಎಂ ಕುರ್ಚಿ ಕದನ ಮಧ್ಯೆ ಡಿಕೆಶಿಯಿಂದ ಮಾ.10ಕ್ಕೆ ಡಿನ್ನರ್ ಪಾರ್ಟಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಸಿಎಂ?

CM-ಪ್ರಧಾನಿ ಹುದ್ದೆಗೇರಿದವರು ಯಾವ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಿದ್ದಾರೆ: JDSಗೆ ಡಿಕೆಶಿ ಸವಾಲು

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

SCROLL FOR NEXT