ಸಂಗ್ರಹ ಚಿತ್ರ 
ರಾಜ್ಯ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ.

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಗುರುತಿಸುವ ಉಪಕ್ರಮದ ಭಾಗವಾಗಿ, ಮಾನದಂಡಗಳ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಐದು ಸದಸ್ಯರ ಸಮಿತಿಯನ್ನು ರಚಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ.

ಸಮಿತಿಯಲ್ಲಿ ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್, ಉಪ ಕಾರ್ಯದರ್ಶಿ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ ಶೆಟ್ಟಿ ಸದಸ್ಯರಾಗಿದ್ದಾರೆ.

ಆಂಧ್ರಪ್ರದೇಶ ಸರ್ಕಾರ ಮತ್ತೊಂದು ಪ್ರಾದೇಶಿಕ ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದ್ದು. ಈ ಬಗ್ಗೆ ಅಲ್ಲಿ ಅಳವಡಿಸಿಕೊಳ್ಳಳಾಗಿರುವ ಮಾನದಂಡಗಳು, ಕಾರ್ಯವಿಧಾನದ ಚೌಕಟ್ಟನ್ನು ಸಮಿತಿ ಅಧ್ಯಯನ ನಡೆಸಲಿದೆ.

ಸರ್ಕಾರ ಈ ಹಿಂದೆ ಆಂಧ್ರಪ್ರದೇಶ ಭಾಷ ನೀತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿತ್ತು. ಇದೀಗ ಆಂಧ್ರಪ್ರದೇಶವು ಎರಡನೇ ಅಧಿಕೃತ ಭಾಷೆಯ ಸ್ಥಾನಮಾನವನ್ನು ಹೇಗೆ ಜಾರಿಗೆ ತಂದಿದೆ ಎಂಬುದರ ಕುರಿತು ಸಮಗ್ರ ತಿಳುವಳಿಕೆಯನ್ನು ಪಡೆಯಲು ಬಯಸಿದ್ದು, ಅದರ ವ್ಯಾಪ್ತಿ, ರೂಪ ಮತ್ತು ಕಾನೂನು ಮಾನ್ಯತೆ ಸೇರಿದಂತೆ ಇತರೆ ವಿಚಾರಗಳ ಕುರಿತು ಅಧ್ಯಯನ ನಡೆಸಿ, ಮೂರು ತಿಂಗಳೊಳಗೆ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್