ಸಾಂದರ್ಭಿಕ ಚಿತ್ರ 
ರಾಜ್ಯ

Government ಆಸ್ಪತ್ರೆಗಳಲ್ಲಿ ಮಂಡಿ ಶಸ್ತ್ರಚಿಕಿತ್ಸೆ, ಹಿಪ್ ರಿಪ್ಲೇಸ್‌ಮೆಂಟ್ ಸಂಪೂರ್ಣ ವೆಚ್ಚ ಭರಿಸಲು ಸರ್ಕಾರ ನಿರ್ಧಾರ!

ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಸಂಪೂರ್ಣ ಪ್ಯಾಕೇಜ್ ವೆಚ್ಚವನ್ನು ಸರ್ಕಾರದಿಂದ ಪಡೆಯುತ್ತವೆ. ಮಂಡಿ ಶಸ್ತ್ರ ಚಿಕಿತ್ಸೆಗೆ ರೂ 65,000 ಮತ್ತು ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಗೆ ರೂ 1 ಲಕ್ಷ ಹಣ ನೀಡಲಿದೆ.

ಬೆಂಗಳೂರು: ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಂಡಿ ಶಸ್ತ್ರ ಚಿಕಿತ್ಸೆ (ಟೋಟಲ್ ನೀ ರಿಪ್ಲೇಸ್‌ಮೆಂಟ್) ಮತ್ತು ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್(ಟಿಎಚ್‌ಆರ್) ಶಸ್ತ್ರಚಿಕಿತ್ಸೆ ಅಗತ್ಯವಿರುವ ಸಂಪೂರ್ಣ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ(ABArK)ಯೋಜನೆ' ಅಡಿಯಲ್ಲಿ ಮಂಡಿ ಶಸ್ತ್ರ ಚಿಕಿತ್ಸೆ ಮತ್ತು ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗಿದ್ದು,ಸಂಪೂರ್ಣ ವೆಚ್ಚವನ್ನು ಸರ್ಕಾರವೆ ಪಾವತಿಸಲಿದೆ.

ಸಾರ್ವಜನಿಕ ಆರೋಗ್ಯ ಸಂಸ್ಥೆಗಳು (PHI ಗಳು) ಸಂಪೂರ್ಣ ಪ್ಯಾಕೇಜ್ ವೆಚ್ಚವನ್ನು ಸರ್ಕಾರದಿಂದ ಪಡೆಯುತ್ತವೆ. ಮಂಡಿ ಶಸ್ತ್ರ ಚಿಕಿತ್ಸೆಗೆ ರೂ 65,000 ಮತ್ತು ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಗೆ ರೂ 1 ಲಕ್ಷ ಹಣ ನೀಡಲಿದೆ. ಇದು ಹಿಂದಿನ ಶೇ. 75ಕ್ಕಿಂತ ಮರುಪಾವತಿ ದರಕ್ಕಿಂತ ಹೆಚ್ಚಾಗಿದೆ.

ಇಲ್ಲಿಯವರೆಗೆ, ರಾಜ್ಯ ಸರ್ಕಾರವು ಒಟ್ಟು ಶಸ್ತ್ರಚಿಕಿತ್ಸೆಯ ವೆಚ್ಚದ ಮುಕ್ಕಾಲು ಭಾಗವನ್ನು ಮಾತ್ರ ನೀಡುತ್ತಿತ್ತು. ಇದರಿಂದ ಆಸ್ಪತ್ರೆಗಳು ಇಂಪ್ಲಾಂಟ್ ವೆಚ್ಚಗಳು ಮತ್ತು ಶಸ್ತ್ರಚಿಕಿತ್ಸಾ ಲಾಜಿಸ್ಟಿಕ್ಸ್ ನಿರ್ವಹಿಸಲು ಹೆಣಗಾಡುವಂತಾಗಿತ್ತು.

ಖಾಸಗಿ ಅಥವಾ ಸರ್ಕಾರಿ ಸಂಸ್ಥೆಗಳ ಅನುಭವಿ ಮೂಳೆಚಿಕಿತ್ಸಕರು ಸಾರ್ವಜನಿಕ ಆರೋಗ್ಯ ಸಂಸ್ಥೆಗಳೊಂದಿಗೆ ಕೈ ಜೋಡಿಸುತ್ತಾರೆ. ಇದರ ಅಡಿಯಲ್ಲಿ, ಮೆಂಟರ್ ಸರ್ಜನ್ ಗಳು ಪ್ರಾಯೋಗಿಕ ಕಾರ್ಯವಿಧಾನಗಳ ಮೂಲಕ ಸ್ಥಳೀಯ ತಂಡಗಳಿಗೆ ತರಬೇತಿ ನೀಡಲು ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹೊಸ ಆದೇಶವು ಆಸ್ಪತ್ರೆಯ ಮಟ್ಟ ಮತ್ತು ನಡೆಸಿದ ಶಸ್ತ್ರಚಿಕಿತ್ಸೆಯ ಪ್ರಕಾರವನ್ನು ಅವಲಂಬಿಸಿ ಈ ಮಾರ್ಗದರ್ಶಕ ಶಸ್ತ್ರಚಿಕಿತ್ಸಕರಿಗೆ ಹಣ ನೀಡುತ್ತದೆ.

ಖಾಸಗಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕರು ಪೂರ್ಣ ಪ್ಯಾಕೇಜ್ ವೆಚ್ಚದ ಮೇಲೆ ಲೆಕ್ಕಹಾಕಿದ ಹಣ ಪಡೆಯುತ್ತಾರೆ, ಆದರೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವ ಸರ್ಕಾರಿ ಅಥವಾ ಸ್ವಾಯತ್ತ ಸಂಸ್ಥೆಯ ಶಸ್ತ್ರಚಿಕಿತ್ಸಕರಿಗೆ ಕಾರ್ಯವಿಧಾನದ ವೆಚ್ಚದ ಶೇ. 75 ರಷ್ಟು ಹಣ ಪಾವತಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT