ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ  
ರಾಜ್ಯ

ಮೈಸೂರು ಡ್ರಗ್ಸ್ ಟ್ರೈ-ಜಂಕ್ಷನ್?; ತಮಿಳುನಾಡು, ಕೇರಳ ಗಡಿಯಲ್ಲಿ ನಿಗಾ

ಕಳೆದ ಜುಲೈ 27 ರಂದು ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್‌ರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದರು.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ ಪತ್ತೆಯಾದ ನಂತರ ಕರ್ನಾಟಕದ ಗಡಿಗಳಲ್ಲಿ ಪ್ರಮುಖವಾಗಿ ಕೇರಳ ಮತ್ತು ತಮಿಳುನಾಡು ಪೊಲೀಸರನ್ನು ಜಾಗರೂಕರನ್ನಾಗಿ ಮಾಡಿದೆ.

ಕಳೆದ ಜುಲೈ 27 ರಂದು ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್‌ರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದಾರೆ.

ಮುಂಬೈ ಪೊಲೀಸ್ ತಂಡವು ಕಾರ್ಖಾನೆ ಮೇಲೆ ದಾಳಿ ನಡೆಸಿ 381.96 ಕೋಟಿ ರೂ. ಮೌಲ್ಯದ 187.97 ಕೆಜಿ ಮೆಫೆಡ್ರೋನ್ ಅನ್ನು ವಶಪಡಿಸಿಕೊಂಡಿದೆ. ಇದು ಮೈಸೂರು ಪೊಲೀಸರ ಗಾಢ ನಿದ್ರೆಯಲ್ಲಿರುವುದನ್ನು ಬಹಿರಂಗಪಡಿಸಿತು ಮತ್ತು ಪಿಂಚಣಿದಾರರ ಸ್ವರ್ಗ ಎಂದು ಕರೆಯಲ್ಪಡುವ ನಗರದಲ್ಲಿ ಹುಬ್ಬೇರಿಸುವಂತೆ ಮಾಡಿದೆ.

MDMA ಜೊತೆಗೆ ಕಳೆದ ಎರಡು ವರ್ಷಗಳಲ್ಲಿ 170 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದೇವೆ ಎಂದು ನಗರ ಪೊಲೀಸರು ಹೆಮ್ಮೆಪಡುತ್ತಿದ್ದಾರೆ. ಆದರೆ ವ್ಯಾಪಾರಿಗಳ ಮೇಲೆ ನಿಗಾ ಇಡಲು ಯಾವುದೇ ಕಾಂಕ್ರೀಟ್ ಮತ್ತು ಆಕ್ರಮಣಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ.

ಕರ್ನಾಟಕ-ಕೇರಳ ಗಡಿಯಲ್ಲಿರುವ ವಯನಾಡ್ ಮೂಲಕ ವಿವಿಧ ಮಾರ್ಗಗಳ ಮೂಲಕ ಕೇರಳಕ್ಕೆ ಮಾದಕ ದ್ರವ್ಯಗಳನ್ನು ಸಾಗಿಸಲು ಡ್ರಗ್ಸ್ ಮಾಫಿಯಾ ಮೈಸೂರನ್ನು ಟ್ರೈ-ಜಂಕ್ಷನ್ ಆಗಿ ಬಳಸಿಕೊಂಡಿತು. ನಂತರ ಅದನ್ನು ದಕ್ಷಿಣಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ಮಾದಕ ದ್ರವ್ಯ ಮಾರಾಟದಲ್ಲಿ ತೊಡಗಿರುವವರು, ಚಾಮರಾಜನಗರ ಮತ್ತು ಸತ್ಯಮಂಗಲಂ ಮೂಲಕ ತಮಿಳುನಾಡಿಗೆ ಡ್ರಗ್ಸ್ ಸಾಗಿಸಿ ಆ ರಾಜ್ಯದ ಪ್ರಮುಖ ನಗರಗಳಲ್ಲಿ ಡ್ರಗ್ಸ್ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

ರಿಂಗ್ ರಸ್ತೆ, ಕೈಗಾರಿಕಾ ಪ್ರದೇಶಗಳಲ್ಲಿ ಪ್ರತ್ಯೇಕವಾದ ಫಾರ್ಮ್‌ಹೌಸ್‌ಗಳು, ಗೋಡೌನ್‌ಗಳು ಹಾಗೂ ಶೆಡ್‌ಗಳು ಮತ್ತು ವಿಜಯನಗರ, ಹೆಬ್ಬಾಳ, ಮೇಟಗಳ್ಳಿ ಸೇರಿದಂತೆ ಇತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕೆಲವು ತೋಟಗಳನ್ನು ಈ ಡ್ರಗ್ಸ್ ಮಾಫಿಯಾ ಬಳಸಿಕೊಳ್ಳುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೈಸೂರು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮೈಸೂರಿನಲ್ಲಿ 390 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕರ್ನಾಟಕದ ಗೃಹ ಸಚಿವರು ಏನು ಹೇಳುತ್ತಾರೆ? ಇವು ಪ್ರತ್ಯೇಕ ಘಟನೆಗಳಲ್ಲ; ಅವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ವಿಶಿಷ್ಟ ಸಾಧನೆಗಳಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ "ನಾವು ವಿಫಲರಾಗಿದ್ದೇವೆ" ಎಂದು ಗೃಹ ಸಚಿವರು ಒಪ್ಪಿಕೊಳ್ಳುತ್ತಾರೆಯೇ? ಎಂದು ಪ್ರಶ್ನಿಸಿದ್ದು, ಇದು ಕೇವಲ ವೈಫಲ್ಯವಲ್ಲ, ಆಡಳಿತದ ಸಂಪೂರ್ಣ ಕುಸಿತ ಎಂದು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸರ್ಕಾರದ ಮೇಲೆ ಹೆಚ್ಚಿದ ಒತ್ತಡ

ಮೈಸೂರು ಪೊಲೀಸರ ವೈಫಲ್ಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿರುವುದರಿಂದ ಮೈಸೂರು ಡ್ರಗ್ಸ್ ಪ್ರಕರಣವು ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.

ಡ್ರಗ್ಸ್ ಜಾಲ ಪತ್ತೆಯಾದ ಹಿನ್ನೆಲೆ ರಾಜ್ಯ ಸರ್ಕಾರದ ಗೃಹ ಇಲಾಖೆ ವೈಫಲ್ಯ ಖಂಡಿಸಿ ನಗರದ ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಘಟಕಗಳು ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

SCROLL FOR NEXT