ನಾಂದಣಿ ಮಠದ ಮಾಧುರಿ ಆನೆ 
ರಾಜ್ಯ

ಹುಬ್ಬಳ್ಳಿ: ಅಂಬಾನಿ ಒಡೆತನದ ಅಭಯಾರಣ್ಯಕ್ಕೆ ನಾಂದಣಿ ಮಠದ ಆನೆ ಸ್ಥಳಾಂತರ; ಜೈನ ಸಮುದಾಯ ವಿರೋಧ!

ಪೆಟಾ-ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಆನೆಯನ್ನು ವಂತಾರ ಮೃಗಾಲಯಕ್ಕೆ ವರ್ಗಾಯಿಸಲು ಸೂಚಿಸಿತ್ತು. ಅದರಂತೆ ಆನೆಯನ್ನು ಸ್ಥಳಾಂತರ ಮಾಡಲಾಗಿದೆ.

ಹುಬ್ಬಳ್ಳಿ: ಕೊಲ್ಲಾಪುರದ ನಾಂದಣಿ ಮಠದಿಂದ ಮಾದೇವಿ ಎಂಬ ಆನೆಯನ್ನು ಅನಂತ್ ಅಂಬಾನಿ ನಿರ್ವಹಿಸುತ್ತಿರುವ ಗುಜರಾತ್‌ನ ವಂತಾರ ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸುವುದಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಜೈನ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಪೆಟಾ-ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಆನೆಯನ್ನು ವಂತಾರ ಮೃಗಾಲಯಕ್ಕೆ ವರ್ಗಾಯಿಸಲು ಸೂಚಿಸಿತ್ತು. ಅದರಂತೆ ಆನೆಯನ್ನು ಸ್ಥಳಾಂತರ ಮಾಡಲಾಗಿದೆ. ಆದರೆ, ಈ ಕ್ರಮವನ್ನು ಅನೇಕ ಜೈನರು ಖಂಡಿಸಿದ್ದಾರೆ. ಆನೆಯನ್ನು ಅನಂತ್ ಅಂಬಾನಿಯ ಖಾಸಗಿ ಉದ್ಯಮವಾಗಿರುವ ವಂತಾರ ಕೇಂದ್ರದಲ್ಲಿ ಇರಿಸುವ ಬದಲು ಮಠಕ್ಕೆ ಹಿಂತಿರುಗಿಸಬೇಕು ಅಥವಾ ಸರ್ಕಾರಿ ಮೃಗಾಯಲಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಪ್ರತಿಭಟನೆಗಳನ್ನು ಯೋಜಿಸಲಾಗುತ್ತಿದೆ, ಭಾರತದಾದ್ಯಂತದ ಪ್ರಮುಖ ಜೈನ ಸಂತರು ಈ ವಿಷಯವನ್ನು ತೀವ್ರಗೊಳಿಸುವ ಪ್ರತಿಜ್ಞೆ ಮಾಡಿದ್ದಾರೆ. ಆನೆಯನ್ನು ಮಠಕ್ಕೆ ಹಿಂದಿರುಗಿಸುವಂತೆ ಒತ್ತಾಯಿಸಿ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರಿಗೆ ಅರ್ಜಿ ಸಲ್ಲಿಸಲು ಉದ್ದೇಶಿಸಿದೆ.

ಈ ವಾರದ ಆರಂಭದಲ್ಲಿ ನಂದನಿ ಮಠದ ಶ್ರೀಗಳು ಆನೆ ನಿರ್ಗಮನದ ಸಮಯದಲ್ಲಿ ಅಳುತ್ತಿರುವ ವೀಡಿಯೊಗಳು ವೈರಲ್ ಆದ ನಂತರ ಸಾರ್ವಜನಿಕ ಆಕ್ರೋಶ ತೀವ್ರಗೊಂಡಿತು. ಇದಕ್ಕೆ ಪ್ರತಿಯಾಗಿ, ಜೈನ ಸಮುದಾಯದ ಹಲವಾರು ಸದಸ್ಯರು ಅಂಬಾನಿ ನೇತೃತ್ವದ ಜಿಯೋ ಬ್ರ್ಯಾಂಡ್ ನೀಡುವ ಉತ್ಪನ್ನಗಳು ಮತ್ತು ಸೇವೆಗಳನ್ನು ಬಹಿಷ್ಕರಿಸಲು ಪ್ರಾರಂಭಿಸಿದ್ದಾರೆ.

ಆನೆಯ ಕಳಪೆ ಯೋಗಕ್ಷೇಮ ಮತ್ತು ಆಕ್ರಮಣಕಾರಿ ಇತಿಹಾಸವನ್ನು ಉಲ್ಲೇಖಿಸಿ ಪೆಟಾ ಇಂಡಿಯಾ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇತ್ತೀಚಿನ ವರ್ಷಗಳಲ್ಲಿ ಜೈನ ಸ್ವಾಮೀಜಿಯೊಬ್ಬರ ಸಾವಿಗೆ ಕಾರಣವಾದ ಆರೋಪ ಸೇರಿದಂತೆ ಅಪಾಯಕಾರಿ ನಡವಳಿಕೆಯನ್ನು ಪ್ರದರ್ಶಿಸಿದೆ ಎಂದು ವಿವರಿಸಲಾದ 35 ವರ್ಷದ ಹೆಣ್ಣು ಆನೆಯನ್ನು ಗುಜರಾತ್‌ನಲ್ಲಿ ಹೊಸದಾಗಿ ಸ್ಥಾಪಿಸಲಾದ ವಂತಾರ ಅಭಯಾರಣ್ಯಕ್ಕ ಸ್ಥಳಾಂತರಿಸಲು ಆದೇಶಿಸಲಾಯಿತು. ಜೈನ ಸಮುದಾಯವು ಈ ಕ್ರಮವನ್ನು ಅವರ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳಿಗೆ ಮಾಡಿದ ಅವಮಾನವೆಂದು ಹೇಳಿದೆ.

“ಜೈನರು ಕರುಣೆ ಮತ್ತು ಅಹಿಂಸೆಗೆ ಹೆಸರುವಾಸಿಯಾಗಿದ್ದಾರೆ. ಈ ಆನೆ ದಶಕಗಳಿಂದ ನಮ್ಮ ಆಧ್ಯಾತ್ಮಿಕ ಜೀವನದ ಭಾಗವಾಗಿದೆ ಎಂದು ವರೂರ್ ದೇವಾಲಯದ ಮುಖ್ಯಸ್ಥ ಗುಣದತ್ತನಂದಿ ಮಹಾರಾಜ್ ಹೇಳಿದರು. ಮೊದಲು ಗುಜರಾತ್‌ನಲ್ಲಿ ಗಿರ್ನಾರ್ ದೇವಾಲಯ ಮತ್ತು ಈಗ ಇದು. ಆನೆಯನ್ನು ನಂದನಿ ಮಠಕ್ಕೆ ಮರಳಿ ತರುವುದು ನಮ್ಮ ಉದ್ದೇಶವಾಗಿದೆ ಈ ಸಾಂಸ್ಕೃತಿಕ ನಷ್ಟವನ್ನು ಹಿಮ್ಮೆಟ್ಟಿಸಲು ನಾವು ಅತ್ಯುನ್ನತ ಅಧಿಕಾರಿಗಳನ್ನು ಸಂಪರ್ಕಿಸುತ್ತೇವೆ ಎಂದಿದ್ದಾರೆ.

14,000 ಕ್ಕೂ ಹೆಚ್ಚು ಗೋಶಾಲೆಗಳನ್ನು ನಡೆಸುವ ನಮಗೆ ಪ್ರಾಣಿ ಕಲ್ಯಾಣದ ಬಗ್ಗೆ ಪಾಠ ಕಲಿಸುವ ಅಗತ್ಯವಿದೆಯೇ? ಸರ್ಕಾರವು ಆನೆಯನ್ನು ಸ್ಥಳಾಂತರಿಸುವ ಬದಲು ಪರಿಸ್ಥಿತಿಗಳನ್ನು ಸುಧಾರಿಸಲು ಮಠದೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲವೇ? ಮಹಾರಾಷ್ಟ್ರಕ್ಕೆ ತನ್ನದೇ ಆದ ಸೌಲಭ್ಯವಿಲ್ಲದಿದ್ದರೆ, ಆನೆಯನ್ನು ಗುಜರಾತ್‌ಗೆ ಏಕೆ ಕಳುಹಿಸಬೇಕು?" ಎಂದು ಕನಕಗಿರಿ ಮಠದ ಭುವನಕೀರ್ತಿ ಬಟ್ಟಾರಕ ಸ್ವಾಮೀಜಿ ಪ್ರಶ್ನಿಸಿದ್ದಾರೆ. ಆನೆಯ ಕಲ್ಯಾಣಕ್ಕಾಗಿ ಸ್ಥಳಾಂತರ ಅತ್ಯಗತ್ಯ ಎಂದು ಪೆಟಾ ಸಮರ್ಥಿಸಿಕೊಂಡಿದೆ. ಆನೆಗೆ ತಜ್ಞರ ಆರೈಕೆಯ ಅಗತ್ಯವನ್ನು ಒತ್ತಿ ಹೇಳಿದೆ, ಅದನ್ನು ಒದಗಿಸಲು ವಂತಾರ ಸಜ್ಜಾಗಿದೆ ಎಂದು ಅವರು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

SCROLL FOR NEXT