ಹೆಚ್ ಸಿ ಮಹದೇವಪ್ಪ 
ರಾಜ್ಯ

KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ವಿವಾದ ಸೃಷ್ಟಿಸಿದ ಮಹದೇವಪ್ಪ ಹೇಳಿಕೆ

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ. ಕೆಆರ್​ಎಸ್​ ಗೇಟ್​ನ ಹೆಬ್ಬಾಗಿಲಿನಲ್ಲಿ ಈಗಲೂ ಅಡಿಗಲ್ಲು ಇದ್ದು ಈ ಸತ್ಯವನ್ನು ಹೇಳಲು ಯಾರಿಗೂ ಧೈರ್ಯ ಇಲ್ಲ ಎಂದು ಹೇಳಿದರು.

ಟಿಪ್ಪು ಸುಲ್ತಾನ್ ನನ್ನು ಹೊಗಳುವ ಭರದಲ್ಲಿ ಸಚಿವರು ಮೈಸೂರು ಅರಸರ ಸಾಧನೆಯನ್ನು ಕಡೆಗಣಿಸುವ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಟಿಪ್ಪು ಸುಲ್ತಾನ್ ದೇವದಾಸಿ ಪದ್ಧತಿ ರದ್ದು ಮಾಡಿದರು. ಟಿಪ್ಪು ಸುಲ್ತಾನ್​ ಅವರ ಕಾಲದಲ್ಲಿ ಒಂದೇ ಒಂದು ಇಂಚು ಭೂಮಿಯನ್ನು ಉಳ್ಳವರಿಗೆ ಕೊಟ್ಟಿರಲಿಲ್ಲ. ಟಿಪ್ಪು ಸುಲ್ತಾನ್ ಭಾರತ ದೇಶಕ್ಕೆ ರೇಷ್ಮೆ ಕೃಷಿ ತಂದರು. ಮೈಸೂರಿನ ಅರಮನೆ ಇದ್ದಿದ್ದು ಶ್ರೀರಂಗಪಟ್ಟಣದಲ್ಲಿ. ಟಿಪ್ಪು ಸುಲ್ತಾನ್​ ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

'India MY Matrubhumi', ಜೈ ಶ್ರೀರಾಮ್ , ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!

ಸಂಭಾಲ್ ಮಸೀದಿ ನೆಲಸಮಕ್ಕೆ ತಡೆ ನೀಡಲು ಅಲಹಾಬಾದ್ ಹೈಕೋರ್ಟ್ ನಕಾರ

'ತಂಡದ ಹಿತಾಸಕ್ತಿಯೇ ಮುಖ್ಯ': ನಾಯಕತ್ವದಿಂದ ರೋಹಿತ್ ಶರ್ಮಾಗೆ ಕೊಕ್, ಕೊನೆಗೂ ಮೌನ ಮುರಿದ BCCI ಹೇಳಿದ್ದೇನು?

SCROLL FOR NEXT