ಪ್ರಾತಿನಿಧಿಕ ಚಿತ್ರ 
ರಾಜ್ಯ

ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನ: ಆಗಸ್ಟ್ 8ಕ್ಕೆ ಕಾಂಗ್ರೆಸ್ ಪ್ರತಿಭಟನೆ ಮುಂದೂಡಿಕೆ

'ಪ್ರತಿಭಟನೆ ನಡೆಸಲಾಗುತ್ತದೆ. ಆದರೆ, ಆಗಸ್ಟ್ 8ಕ್ಕೆ ಮುಂದೂಡಲಾಗಿದೆ' ಎಂದು ಸುರ್ಜೇವಾಲ ಹೇಳಿದರು. ಈ ವೇಳೆ ಉಪ ಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಇದ್ದರು.

ಬೆಂಗಳೂರು: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನದ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಿರುವುದಾಗಿ ರಾಜ್ಯ ಕಾಂಗ್ರೆಸ್ ಉಶ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೋಮವಾರ ಘೋಷಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಂಗಳವಾರ ಸೋರೆನ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

'ಪ್ರತಿಭಟನೆ ನಡೆಸಲಾಗುತ್ತದೆ. ಆದರೆ, ಆಗಸ್ಟ್ 8ಕ್ಕೆ ಮುಂದೂಡಲಾಗಿದೆ' ಎಂದು ಸುರ್ಜೇವಾಲ ಹೇಳಿದರು. ಈ ವೇಳೆ ಉಪ ಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಇದ್ದರು.

ವಿಧಾನಸಭೆ ಮತ್ತು ಲೋಕಸಭೆಯಲ್ಲಿ ನಡೆದಿದೆ ಎನ್ನಲಾದ 'ಮತಗಳ್ಳತನ'ದ ವಿರುದ್ಧ ಆಗಸ್ಟ್ 5ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಲಾಗಿತ್ತು. 2023ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಕಾಂಗ್ರೆಸ್ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!