ಕನಕಪುರ ರಸ್ತೆಯ ಬಳಿಯ ಹೆಮ್ಮಿಗೆಪುರದಲ್ಲಿ ರಸ್ತೆಯಲ್ಲಿರುವ ಗುಂಡಿಗಳು 
ರಾಜ್ಯ

'Greater ಬೆಂಗಳೂರು' ಅಲ್ಲ, 'crater ಬೆಂಗಳೂರು' ನೀಡುತ್ತಿದ್ದೀರಿ: ಡಿಕೆಶಿ ವಿರುದ್ಧ ವಾಜರಹಳ್ಳಿ ನಿವಾಸಿಗಳ ಕಿಡಿ

ಕನಕಪುರ ರೋಡ್ ಚೇಂಜ್ ಮೇಕರ್ ಸಂಸ್ಥೆಯ ಶ್ರೀವತ್ಸ ಅವರು ಮಾತನಾಡಿ, ಉಪ ಮುಖ್ಯಮಂತ್ರಿಗಳು ಗ್ರೇಟರ್ ಬೆಂಗಳೂರು ಮಾಡುವ ಭರವಸೆ ನೀಡಿದ್ದರು. ಆದರೆ, ನಗರದ ರಸ್ತೆಗಳ ಗುಂಡಿಗಳನ್ನು ಸರಿಪಡಿಸಿಲ್ಲ. ರಸ್ತೆಗಳ ಸ್ಥಿತಿ ಹದಗೆಟ್ಟಿವೆ.

ಬೆಂಗಳೂರು: 100 ಅಡಿ ಉದ್ದದ ವಾಜರಹಳ್ಳಿ-ತುರಹಳ್ಳಿ ಅರಣ್ಯ ಮುಖ್ಯ ರಸ್ತೆಯಲ್ಲಿ ನೂರಾರು ಗುಂಡಿಗಳು ನಿರ್ಮಾಣಗೊಂಡಿದ್ದು, ಇದರಿಂದ ತೀವ್ರವಾಗಿ ಆಕ್ರೋಶಗೊಂಡಿರುವ ಸ್ಥಳೀಯ ನಿವಾಸಿಗಳು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು 'ಗ್ರೇಟರ್ ಬೆಂಗಳೂರು' ಎಂದು ಭರವಸೆ ನೀಡಿ 'ಕ್ರೇಟರ್ ಬೆಂಗಳೂರು' ನೀಡಿದ್ದಾರೆಂದು ಕಿಡಿಕಾರಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಒಂದು ವರ್ಷದ ಹಿಂದೆ ರಸ್ತೆಗೆ ಡಾಂಬರು ಹಾಕಿತ್ತು. ಅದಾದ ಒಂದು ತಿಂಗಳೊಳಗೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (ಕೆಪಿಟಿಸಿಎಲ್) ಮತ್ತು ಬೆಂಗಳೂರು ನೀರು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ರಸ್ತೆಯನ್ನು ಅಗೆಯಿತು. ಅಂದಿನಿಂದ, ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ.

ಕನಕಪುರ ರೋಡ್ ಚೇಂಜ್ ಮೇಕರ್ ಸಂಸ್ಥೆಯ ಶ್ರೀವತ್ಸ ಅವರು ಮಾತನಾಡಿ, ಉಪ ಮುಖ್ಯಮಂತ್ರಿಗಳು ಗ್ರೇಟರ್ ಬೆಂಗಳೂರು ಮಾಡುವ ಭರವಸೆ ನೀಡಿದ್ದರು. ಆದರೆ, ನಗರದ ರಸ್ತೆಗಳ ಗುಂಡಿಗಳನ್ನು ಸರಿಪಡಿಸಿಲ್ಲ. ರಸ್ತೆಗಳ ಸ್ಥಿತಿ ಹದಗೆಟ್ಟಿವೆ. ಬೆಂಗಳೂರಿನ ಹಲವು ರಸ್ತೆಗಳು ಗುಂಡಿಮಯವಾಗಿವೆ. ಸರ್ಕಾರಕ್ಕೆ ಪತ್ರ ಬರೆದ ಬಳಿಕ ವಾಜರಹಳ್ಳಿಯ ಕೆಲ ರಸ್ತೆಗಳಿಗೆ ತೇಪೆ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಬಿಡಿಎ ರಸ್ತೆ ನಿರ್ಮಿಸಿತ್ತು, ಆದರೆ, ಒಂದು ತಿಂಗಳೊಳಗೆ ಕೆಪಿಟಿಸಿಎಲ್ ರಸ್ತೆಯನ್ನು ಅಗೆಯಿತು ನಂತರ, ಬಿಡಬ್ಲ್ಯೂಎಸ್ಎಸ್ಬಿ ಕೂಡ ಪೈಪ್ ಸಂಪರ್ಕಕ್ಕಾಗಿ ರಸ್ತೆಯನ್ನು ಅಗೆಯಿತು. ರಸ್ತೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಹೀಗಾಗಿ, ನಾಗರೀಕ ಸಂಸ್ಥೆಗಳಿಗೆ ಕೆಲಸಗಳ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಾದಚಾರಿಗಳಿಗೆ ಕೊನೆಯ ಮೈಲಿ ಸಂಪರ್ಕಕ್ಕಾಗಿ ಪಾದಚಾರಿ ಮಾರ್ಗಗಳು ಮತ್ತು ಚರಂಡಿಗಳ ಸುಧಾರಣೆ ಕಾರ್ಯವನ್ನು ಸಹ ಕೈಗೆತ್ತಿಕೊಂಡಿರುವುದರಿಂದ, ಈ ಯೋಜನೆ ಪೂರ್ಣಗೊಂಡ ನಂತರ, ರಸ್ತೆ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT