ಭೂಕಂಪನ (ಸಾಂದರ್ಭಿಕ ಚಿತ್ರ) online desk
ರಾಜ್ಯ

ವಿಜಯಪುರದಲ್ಲಿ ಕಡಿಮೆ ತೀವ್ರತೆಯ ಎರಡು ಭೂಕಂಪನ

ಮೊದಲನೆಯದು ಟಿಕೋಟಾ ತಾಲ್ಲೂಕಿನ ಹೊನ್ವಾಡ್ ಗ್ರಾಮ ಪಂಚಾಯತ್‌ನ ಪೂರ್ವ-ಈಶಾನ್ಯ (ENE) 2.9 ಕಿ.ಮೀ ದೂರದಲ್ಲಿ ಬೆಳಿಗ್ಗೆ 11.41 ಕ್ಕೆ ಸಂಭವಿಸಿದೆ.

ಸೋಮವಾರ ವಿಜಯಪುರ ಜಿಲ್ಲೆಯಲ್ಲಿ ಎರಡು ಕಡಿಮೆ ತೀವ್ರತೆಯ ಕಂಪನಗಳು ದಾಖಲಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆಯನ್ನು ಹೊಂದಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಪ್ರಕಾರ, ಈ ಕಂಪನಗಳು ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆಯನ್ನು ಹೊಂದಿದ್ದವು.

ಮೊದಲನೆಯದು ಟಿಕೋಟಾ ತಾಲ್ಲೂಕಿನ ಹೊನ್ವಾಡ್ ಗ್ರಾಮ ಪಂಚಾಯತ್‌ನ ಪೂರ್ವ-ಈಶಾನ್ಯ (ENE) 2.9 ಕಿ.ಮೀ ದೂರದಲ್ಲಿ ಬೆಳಿಗ್ಗೆ 11.41 ಕ್ಕೆ ಸಂಭವಿಸಿದೆ ಮತ್ತು ಎರಡನೆಯದು ಬಸವನ ಬಾಗೇವಾಡಿ ತಾಲ್ಲೂಕಿನ ಮಂಗೋಲಿ ಗ್ರಾಮ ಪಂಚಾಯತ್‌ನಲ್ಲಿ ಕೇಂದ್ರೀಕೃತವಾಗಿದೆ.

ಭೂಕಂಪದ ಘಟನೆಯು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. "ಸೆಸ್ಮಿಕ್ ತೀವ್ರತೆಯ ನಕ್ಷೆಯ ಪ್ರಕಾರ, ಭೂಕಂಪನದ ತೀವ್ರತೆಯು ತುಂಬಾ ಕಡಿಮೆಯಾಗಿದೆ ಮತ್ತು ಭೂಕಂಪ ಕೇಂದ್ರಬಿಂದುವಿನಿಂದ 20-30 ಕಿ.ಮೀ ರೇಡಿಯಲ್ ದೂರದವರೆಗೆ ಅನುಭಕ್ಕೆ ಬರಬಹುದಾಗಿದೆ. ತೀವ್ರತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಈ ರೀತಿಯ ಭೂಕಂಪಗಳು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿಯನ್ನುಂಟುಮಾಡುವುದಿಲ್ಲ. ಆದರೂ ಸ್ಥಳೀಯ ಕಂಪನಗಳು ಅನುಭವಿಸಬಹುದು" ಎಂದು KSNDMC ಹೇಳಿಕೆಯಲ್ಲಿ ತಿಳಿಸಿದೆ.

ಭೂಕಂಪನ ಕೇಂದ್ರಬಿಂದು ಭೂಕಂಪ ವಲಯ -3 ರಲ್ಲಿದೆ ಮತ್ತು ಭೂಕಂಪ-ಟೆಕ್ಟೋನಿಕ್ ನಕ್ಷೆಯ ಪ್ರಕಾರ ಈ ಪ್ರದೇಶವು ಯಾವುದೇ ರಚನಾತ್ಮಕ ಸ್ಥಗಿತಗಳಿಂದ ಮುಕ್ತವಾಗಿದೆ ಎಂದು ಅದು ಹೇಳಿದೆ.

"ಗಮನಿಸಲಾದ ಪ್ರಮಾಣ ಮತ್ತು ತೀವ್ರತೆಗಳು ತುಂಬಾ ಕಡಿಮೆ ಇರುವುದರಿಂದ ಸಮುದಾಯವು ಭಯಭೀತರಾಗುವ ಅಗತ್ಯವಿಲ್ಲ" ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ದಿನಕ್ಕೊಂದು, ಕ್ಷಣಕ್ಕೊಂದು ಮಾತನಾಡಬೇಡಿ": ಇರಾನ್ ಯುದ್ಧದ ಬಗ್ಗೆ ಟ್ರಂಪ್​ಗೆ ಮ್ಯಾಕ್ರನ್ ಮಂಗಳಾರತಿ!

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

IPL 2026: ಅಭಿಷೇಕ್, ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ SRH ಭರ್ಜರಿ ಗೆಲುವು

ಪಶ್ಚಿಮ ಏಷ್ಯಾ ಯುದ್ಧದ ಪರಿಸ್ಥಿತಿ ನಿರ್ವಹಣೆ: ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ಹಿರಿಯ ನಾಯಕ; ಪಕ್ಷಕ್ಕೆ ತೀವ್ರ ಮುಜುಗರ!

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...

SCROLL FOR NEXT