ಅಶ್ವಿನಿ ವೈಷ್ಣವ್  
ರಾಜ್ಯ

ದೇಶಿ ನಿರ್ಮಿತ ಸೆಮಿಕಂಡಕ್ಟರ್ ಚಿಪ್ ಶೀಘ್ರದಲ್ಲೇ ಬಿಡುಗಡೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ವಿಕಸಿತ ಭಾರತ 2047 ದೃಷ್ಟಿಕೋನಕ್ಕೆ ಭಾರತದ ಇತ್ತೀಚಿನ ತಂತ್ರಜ್ಞಾನ ಬೆಳವಣಿಗೆ ನಿಕಟವಾಗಿ ಹೊಂದಿಕೆಯಾಗುತ್ತದೆ ಎಂದು ಹೇಳಿದರು.

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಡಿಜಿಟಲ್ ನಾವೀನ್ಯತೆಯಲ್ಲಿ ಭಾರತವು ಬೆಳವಣಿಗೆ ಹಾದಿಯಲ್ಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ, ಕಳೆದ ದಶಕದಲ್ಲಿ ದೇಶದ ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ಎಂಟು ಪಟ್ಟು ಬೆಳವಣಿಗೆ ಮತ್ತು ಮೊದಲ ಸ್ವದೇಶಿ ಸೆಮಿಕಂಡಕ್ಟರ್ ಚಿಪ್ ನ್ನು ಉತ್ಪಾದಿಸುವ ಸಾಧನೆಯನ್ನು ತೋರಿಸುತ್ತದೆ.

ದೇವನಹಳ್ಳಿಯಲ್ಲಿ ಸ್ಯಾಪ್ ಲ್ಯಾಬ್ಸ್ ಇಂಡಿಯಾದ ಹೊಸ ಇನ್ನೋವೇಶನ್ ಪಾರ್ಕ್ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವರು, ಬುಲೆಟ್ ರೈಲು 54 ಸೆಕೆಂಡುಗಳಲ್ಲಿ 0ಯಿಂದ 100 ಕಿಮೀ ವೇಗವನ್ನು ಹೆಚ್ಚಿಸುತ್ತದೆ, ಆದರೆ ವಂದೇ ಭಾರತ್ ರೈಲು ಅದನ್ನು 52 ಸೆಕೆಂಡುಗಳಲ್ಲಿ ಮಾಡುತ್ತದೆ. ಭಾರತವು ತಂತ್ರಜ್ಞಾನದಲ್ಲಿ ಬೆಳವಣಿಗೆ ಹೊಂದುತ್ತಿರುವ ವೇಗವನ್ನು ಸೂಚಿಸುತ್ತದೆ. ಅದು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಚಿಪ್-ತಯಾರಿಕೆ ಅಥವಾ ಡಿಜಿಟಲ್ ಮೂಲಸೌಕರ್ಯವಾಗಿರಬಹುದು ಎಂದು ಹೇಳಿದರು.

ವಿಕಸಿತ ಭಾರತ 2047 ದೃಷ್ಟಿಕೋನಕ್ಕೆ ಭಾರತದ ಇತ್ತೀಚಿನ ತಂತ್ರಜ್ಞಾನ ಬೆಳವಣಿಗೆ ನಿಕಟವಾಗಿ ಹೊಂದಿಕೆಯಾಗುತ್ತದೆ ಎಂದು ಹೇಳಿದರು. ಕಳೆದ 11 ವರ್ಷಗಳಲ್ಲಿ, ಭಾರತವು 11 ನೇ ಅತಿದೊಡ್ಡ ಆರ್ಥಿಕತೆಯಿಂದ ಶೀಘ್ರದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಗೆ ತಲುಪಿದೆ. ಇದು ಭೌಗೋಳಿಕ ರಾಜಕೀಯ, ಭೂ ಅರ್ಥಶಾಸ್ತ್ರ ಮತ್ತು ಭೂತಂತ್ರಜ್ಞಾನದಲ್ಲಿ ತ್ವರಿತ ಬದಲಾವಣೆಯ ಅವಧಿಯಾಗಿದ್ದು, ಭಾರತವು ಸ್ಥಿರ ನಾಯಕತ್ವದೊಂದಿಗೆ ಅದನ್ನು ಮುನ್ನಡೆಸುತ್ತಿದೆ ಎಂದರು.

34,000 ಕ್ಕೂ ಹೆಚ್ಚು ಗ್ರಾಫಿಕ್ಸ್ ಸಂಸ್ಕರಣಾ ಘಟಕ(GPUs) ಈಗ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಅಡಿಯಲ್ಲಿ ತರಲಾಗಿದೆ. ಕಾಲೇಜುಗಳಾದ್ಯಂತ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆರಂಭಿಕ ಹಂತದ ಸ್ಟಾರ್ಟ್‌ಅಪ್‌ಗಳಿಗೆ ಕಂಪ್ಯೂಟಿಂಗ್ ಪ್ರವೇಶವನ್ನು ನೀಡುತ್ತದೆ ಎಂದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಈ ಹೊಸ ಕ್ಯಾಂಪಸ್, ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಯಲ್ಲಿ SAP ನ ಅತಿದೊಡ್ಡ ಜಾಗತಿಕ ಹೂಡಿಕೆಗಳಲ್ಲಿ ಒಂದಾಗಿದೆ. 41.07 ಎಕರೆ ಪ್ರದೇಶದಲ್ಲಿ ಹರಡಿರುವ ಕ್ಯಾಂಪಸ್ 15,000 ಕ್ಕೂ ಹೆಚ್ಚು ವೃತ್ತಿಪರರಿಗೆ ವಸತಿ ಕಲ್ಪಿಸಲು ವಿನ್ಯಾಸಗೊಳಿಸಲಾಗಿದೆ, ಇದು SAP ನ ಭಾರತದಲ್ಲಿನ ಅತಿದೊಡ್ಡ ಸೌಲಭ್ಯವಾಗಿದೆ. ಒಮ್ಮೆ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದ ನಂತರ, ಇದು ಎಐ-ಚಾಲಿತ ಉತ್ಪನ್ನ ಎಂಜಿನಿಯರಿಂಗ್ ಮತ್ತು ಗ್ರಾಹಕ ಸೇವೆಗಳಲ್ಲಿ ಜಾಗತಿಕ ಪಾತ್ರಗಳನ್ನು ನಿರ್ವಹಿಸುತ್ತದೆ.

ಈ ಕಾರ್ಯಕ್ರಮದ ಸಂದರ್ಭದಲ್ಲಿ SAP ಮತ್ತು ಲಾಜಿಸ್ಟಿಕ್ಸ್ ಮತ್ತು ಮೂಲಸೌಕರ್ಯಕ್ಕೆ ಮೀಸಲಾಗಿರುವ ಕೇಂದ್ರ ವಿಶ್ವವಿದ್ಯಾಲಯವಾದ ಗತಿ ಶಕ್ತಿ ವಿಶ್ವವಿದ್ಯಾಲಯ (GSV) ನಡುವಿನ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಸ್ಯಾಪ್ ನ ಡಿಜಿಟಲ್ ಲಾಜಿಸ್ಟಿಕ್ಸ್ ಪರಿಕರಗಳನ್ನು ಜಿಎಸ್ ವಿಯ ಪಠ್ಯಕ್ರಮದಲ್ಲಿ ಸೇರಿಸುವ ಮೂಲಕ ಸರ್ಕಾರದ ಕೌಶಲ್ಯ ಭಾರತ ಮಿಷನ್ ನ್ನು ಬೆಂಬಲಿಸುವುದು ಪಾಲುದಾರಿಕೆಯ ಗುರಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

SCROLL FOR NEXT