ವಿದ್ಯಾರ್ಥಿಗಳ ಪ್ರತಿಭಟನೆ 
ರಾಜ್ಯ

ಬಾಗಲಕೋಟೆ: ಜಾತಿ ತಾರತಮ್ಯ, ನಿಂದನೆ ಆರೋಪ; ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಶಾಲೆಯಿಂದ ನವನಗರ ಪೊಲೀಸ್ ಠಾಣೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರಾಂಶುಪಾಲರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಬಾಗಲಕೋಟೆ: ಶಾಲೆಗೆ ಮೂಲಸೌಕರ್ಯ ಒದಗಿಸುವಲ್ಲಿ ವಿಫಲವಾಗಿರುವ ಪ್ರಾಂಶುಪಾಲರು ಜಾತಿ ತಾರತಮ್ಯ ಮಾಡುತ್ತಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರಾಂಶುಪಾಲರಾದ ಗೀತಾ ಕಾಪಸೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಾಲಕರು ಮತ್ತು ಬಾಲಕಿಯರು ಭಾಗವಹಿಸಿದ್ದರು.

ಶಾಲೆಯಿಂದ ನವನಗರ ಪೊಲೀಸ್ ಠಾಣೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರಾಂಶುಪಾಲರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಬ್ಲಾಕ್ ಶಿಕ್ಷಣಾಧಿಕಾರಿ ಎಂಎಸ್ ಬಡದಾನಿ ಶಾಲೆಗೆ ಭೇಟಿ ನೀಡಿ ದೂರುಗಳನ್ನು ಸ್ವೀಕರಿಸಿದರು. ಪರಿಸ್ಥಿತಿ ಶಾಂತಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದು, ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಇಲ್ಲ. ತರಗತಿ ಕೊಠಡಿಗಳಲ್ಲಿ ಸರಿಯಾದ ಗಾಳಿ ಮತ್ತು ಶೌಚಾಲಯ ಇಲ್ಲದೆ ನೈರ್ಮಲ್ಯದ ಕೊರತೆ ಹೆಚ್ಚಾಗಿದೆ. ಮೊಟ್ಟೆ, ಬಾಳೆಹಣ್ಣಿನ ಕಳಪೆ ವಿತರಣೆ ಸೇರಿದಂತೆ ಮಧ್ಯಾಹ್ನದ ಊಟದ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆಯೂ ವಿದ್ಯಾರ್ಥಿಗಳು ದೂರು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

T20 ವಿಶ್ವಕಪ್ 2026: ಭಾರತ ಭರ್ಜರಿ ಬೌಲಿಂಗ್, ನಮೀಬಿಯಾ ವಿರುದ್ಧ 93 ರನ್ ಜಯ

Betting Case: MS ಧೋನಿಗೆ ಮದ್ರಾಸ್ ಹೈಕೋರ್ಟ್ ಶಾಕ್, 10 ಲಕ್ಷ ರೂ ಶುಲ್ಕ! ಕಾರಣ?

T20 ವಿಶ್ವಕಪ್ 2026: 6, 6, 6, 6, 4.. ಒಂದೇ ಓವರ್ ನಲ್ಲಿ 28 ರನ್; ದಾಖಲೆಗಳ ಮಳೆ; ಎಲೈಟ್ ಗ್ರೂಪ್ ಸೇರಿದ Ishan Kishan!

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

SCROLL FOR NEXT