ಬೆಂಗಳೂರಿನಲ್ಲಿ 'ಭೂ ಸುರಕ್ಷಾ' ಯೋಜನೆಗೆ ಚಾಲನೆ ನೀಡಿದ ನಂತರ ಕಂದಾಯ ಸಚಿವ ಕೃಷ್ಣ ಬೈರೇಗೌಡ ದಾಖಲೆಗಳನ್ನು ಪರಿಶೀಲಿಸಿದರು. 
ರಾಜ್ಯ

ಈ ವರ್ಷಾಂತ್ಯಕ್ಕೆ ಭೂ ಕಂದಾಯ ದಾಖಲೆಗಳ ಡಿಜಿಟಲೀಕರಣ ಪೂರ್ಣ: ಸಚಿವ ಕೃಷ್ಣ ಬೈರೇಗೌಡ

ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಗುರಿಯನ್ನು ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

ಬೆಂಗಳೂರು: ರಾಜ್ಯದಲ್ಲಿರುವ 100 ಕೋಟಿ ಭೂಕಂದಾಯ ದಾಖಲೆಗಳಲ್ಲಿ 35.36 ಕೋಟಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಡಿಸೆಂಬರ್ ಅಂತ್ಯದ ವೇಳೆಗೆ ಉಳಿದ 65 ಕೋಟಿ ಪುಟಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು ಎಂದು ಅವರು ಹೇಳಿದರು.

ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಗುರಿಯನ್ನು ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ 'ಭೂ ಸುರಕ್ಷಾ' ಯೋಜನೆಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಸಚಿವರು, ಇಂದಿನಿಂದ ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಕಚೇರಿಗಳು ಸಹ ದಾಖಲೆಗಳನ್ನು ಸ್ಕ್ಯಾನ್ ಮಾಡಲು ಪ್ರಾರಂಭಿಸುತ್ತವೆ ಎಂದು ಹೇಳಿದರು.

246 ತಾಲ್ಲೂಕುಗಳ ತಹಶೀಲ್ದಾರ್ ಕಚೇರಿಯಲ್ಲಿ, 'ಎ' ಮತ್ತು 'ಬಿ' ಖಾತಾಗಳನ್ನು ಸ್ಕ್ಯಾನ್ ಮಾಡಲಾಗಿದೆ. ಭೂ ಮಾಲೀಕರು ಡಿಜಿಟಲೀಕರಣಕ್ಕಾಗಿ 'ಭೂ ಸುರಕ್ಷಾ' ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕೆಂದು ತಿಳಿದಿಲ್ಲದಿದ್ದರೆ ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.

ರಾಜ್ಯದ ಕಂದಾಯ ಇಲಾಖೆಯು ಕಳೆದ ವರ್ಷದಿಂದ ಎಲ್ಲಾ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಕೆಲಸ ಮಾಡುತ್ತಿದೆ. 246 ತಾಲ್ಲೂಕುಗಳಲ್ಲಿ 26 ತಾಲ್ಲೂಕುಗಳಲ್ಲಿ ತಹಶೀಲ್ದಾರರು ಎ ಮತ್ತು ಬಿ ಖಾತಾಗಳ ಸ್ಕ್ಯಾನಿಂಗ್ ನ್ನು ಪೂರ್ಣಗೊಳಿಸಿದ್ದಾರೆ.

ದಾಖಲೆ ಕೊಠಡಿಯನ್ನು ಸ್ಕ್ಯಾನ್ ಮಾಡಿ ಆಧುನೀಕರಿಸುವ ಮೂಲಕ ದಾಖಲೆಗಳ ರಕ್ಷಣೆಗಾಗಿ ಕಂದಾಯ ಇಲಾಖೆಯು 5 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಜನರು ಮಧ್ಯವರ್ತಿಗಳ ಹಾವಳಿಯನ್ನು ತಡೆಯುವುದು ಮತ್ತು ಭಾಮಾಲೀಕರ ಭೂ ದಾಖಲೆಗಳು ಅವರ ಬೆರಳ ತುದಿಯಲ್ಲಿ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಭೂ ರಕ್ಷಣಾ ಯೋಜನೆ

10 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಭೂ ಮಾಲೀಕತ್ವಕ್ಕೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಎ ಮತ್ತು ಬಿ ವರ್ಗದ ದಾಖಲೆಗಳಾಗಿ ಸಂರಕ್ಷಿಸಲಾಗಿದೆ. ನಾವು ಭೂ ರಕ್ಷಣಾ ಯೋಜನೆಯನ್ನು ತರುತ್ತಿದ್ದೇವೆ.

ಜನರು ಅಗತ್ಯ ದಾಖಲೆಗಳಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದರೆ, ಅಂತಹ ದಾಖಲೆಗಳನ್ನು ಸ್ಕ್ಯಾನ್ ಮಾಡಿ ವಿತರಿಸುತ್ತೇವೆ. ಪ್ರಮಾಣೀಕೃತ ದಾಖಲೆಗಳನ್ನು ಮಾತ್ರ ಆನ್‌ಲೈನ್‌ನಲ್ಲಿ ವಿತರಿಸಲಾಗುತ್ತದೆ. ದಾಖಲೆಗಳ ನಕಲಿ ನಮೂದು ಮತ್ತು ಸಲ್ಲಿಕೆ ಎಲ್ಲವನ್ನೂ ಪತ್ತೆಹಚ್ಚಲಾಗುತ್ತದೆ. ಭೂ ಸುರಕ್ಷಾ ಯೋಜನೆ ಜಾರಿಯಲ್ಲಿರುವುದರಿಂದ ನಕಲಿ ದಾಖಲೆಗಳ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

SCROLL FOR NEXT