ರಜತ್ ಕಿಶನ್ 
ರಾಜ್ಯ

ಧರ್ಮಸ್ಥಳ ಗಲಾಟೆ: ನಿನ್ನೆ ಏನಾಯ್ತು? ಎಳೆ ಎಳೆಯಾಗಿ ಬಿಚ್ಚಿಟ್ಟ Biggboss ಮಾಜಿ ಸ್ಪರ್ಧಿ ರಜತ್ ಕಿಶನ್!

ಧರ್ಮಸ್ಥಳದ ನೇತ್ರಾವತಿಯ ಪಾಂಗಳದ ಬಳಿ ಯೂಟ್ಯೂಬರ್ಸ್ ಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.

ಮಂಗಳೂರು: ಧರ್ಮಸ್ಥಳದ ನೇತ್ರಾವತಿಯ ಪಾಂಗಳದ ಬಳಿ ಯೂಟ್ಯೂಬರ್ಸ್ ಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಇನ್ನು ನಿನ್ನೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಧರ್ಮಸ್ಥಳಕ್ಕೆ ಹೋಗಿದ್ದ ಸಂದರ್ಭದಲ್ಲಿ ಹಲ್ಲೆ ನಡೆದಿತ್ತು. ಇನ್ನು ಹಲ್ಲೆಗೆ ಸಂಬಂಧಿಸಿದಂತೆ ಮಾತನಾಡಿರುವ ರಜತ್ ನಾನು ಧರ್ಮಸ್ಥಳಕ್ಕೆ ಹೋಗಿದ್ದು, ಸೌಜನ್ಯ ಪ್ರಕರಣದಲ್ಲಿ ನ್ಯಾಯ ಕೇಳೋಕೆ ಮಾತ್ರ. ನಾನು ಯಾವತ್ತೂ ಧರ್ಮಸ್ಥಳದ ಬಗ್ಗೆ ತಪ್ಪಾಗಿ ಮಾತನಾಡಿಲ್ಲ. ನಾನು ಸೌಜನ್ಯ ಕುಟುಂಬಸ್ಥರನ್ನು ಭೇಟಿ ಮಾಡೋಕೆ ಹೋಗಿದ್ದೆ. ಈ ವೇಳೆ ಯೂಟ್ಯೂಬರ್ಸ್ ಜೊತೆ ಮಾತನಾಡುತ್ತಿದ್ದಾಗಲೇ ಅಲ್ಲಿಗೆ ಬಂದ ಗುಂಪೊಂದು ಹಲ್ಲೆ ನಡೆಯಿತು ಎಂದು ತಿಳಿಸಿದ್ದಾರೆ. ಗುಂಪು ಯೂಟ್ಯೂಬರ್ಸ್​ಗೆ ಕಾಲಿನಿಂದ ಒದ್ದು, ಕೋಲಲ್ಲಿ ಮತ್ತು ಕಲ್ಲಲ್ಲಿ ಹೊಡ್ದಿದ್ದಾರೆ. 30ಕ್ಕೂ ಹೆಚ್ಚು ಜನರು ಹಲ್ಲೆ ಮಾಡಿದ್ದರಿಂದ ಏನು ಮಾಡಕ್ಕಾಗದ ಸ್ಥಿತಿಯಲ್ಲಿ ನಿಂತುಕೊಂಡಿದ್ದೇವು ಎಂದು ರಜತ್​ ಕಿಶನ್​ ಯೂಟ್ಯೂಬರ್ಸ್ ಮೇಲೆ ನಡೆದ ಹಲ್ಲೆ ಬಗ್ಗೆ ವಿವರಿಸಿದ್ದಾರೆ. ನನಗೆ ಈಗ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕಿಶನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT