ನೀರಿನ ಟ್ಯಾಂಕ್  
ರಾಜ್ಯ

ಎಲ್ಲಾ ನೀರಿನ ಟ್ಯಾಂಕ್‌ಗಳನ್ನು ಕೂಡಲೇ ಸ್ವಚ್ಛಗೊಳಿಸಿ: ಅಧಿಕಾರಿಗಳಿಗೆ GTD ಸೂಚನೆ

ಸರ್ಕಾರಿ ಭೂಮಿಯನ್ನು ಗುರುತಿಸಲು ಮತ್ತು ಆಸ್ಪತ್ರೆಗಳು, ಶಾಲೆಗಳು ಮತ್ತು ಸ್ಮಶಾನಗಳಂತಹ ಸಾರ್ವಜನಿಕ ಉದ್ದೇಶಗಳಿಗಾಗಿ ಅದನ್ನು ಕಾಯ್ದಿರಿಸಲು ಕಂದಾಯ ಅಧಿಕಾರಿಗಳು ವಾರಕ್ಕೊಮ್ಮೆಯಾದರೂ ಗ್ರಾಮಗಳಿಗೆ ಭೇಟಿ ನೀಡಬೇಕು.

ಮೈಸೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ನೀರು ಕಲುಷಿತಗೊಂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಾಜಿ ಸಚಿವ ಮತ್ತು ಶಾಸಕ ಜಿ.ಟಿ. ದೇವೇಗೌಡ ಅವರು, ತಮ್ಮ ವಿಧಾನಸಭಾ ಕ್ಷೇತ್ರದ ಎಲ್ಲಾ ಹಳ್ಳಿಗಳಲ್ಲಿನ ನೀರಿನ ಟ್ಯಾಂಕ್‌ಗಳನ್ನು ಕೂಡಲೇ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಬುಧವಾ ಸೂಚನೆ ನೀಡಿದ್ದಾರೆ.

ಬುಧವಾರ ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಟಿ ದೇವೇಗೌಡ ಅವರು ಮಾತನಾಡಿದರು.

ಈ ವೇಳೆ ಕ್ಷೇತ್ರದ ಎಲ್ಲಾ ನೀರಿನ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವಂತೆ ಸೂಚನೆ ನೀಡಿದ ಅವರು, ಆದೇಶವನ್ನು ಪಾಲಿಸದ ಪಂಚಾಯತ್ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಇದೇ ವೇಳೆ ಅರಣ್ಯದ ಅಂಚಿನಲ್ಲಿರುವ ಹಳ್ಳಿಗಳಲ್ಲಿ ಹೆಚ್ಚುತ್ತಿರುವ ವನ್ಯಜೀವಿಗಳ ಸಂಚಾರದ ಸಮಸ್ಯೆಯನ್ನು ಪರಿಹರಿಸಲು ಅರಣ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆಚ್ಚುವರಿಯಾಗಿ, ಸರ್ಕಾರಿ ಭೂಮಿಯನ್ನು ಗುರುತಿಸಲು ಮತ್ತು ಆಸ್ಪತ್ರೆಗಳು, ಶಾಲೆಗಳು ಮತ್ತು ಸ್ಮಶಾನಗಳಂತಹ ಸಾರ್ವಜನಿಕ ಉದ್ದೇಶಗಳಿಗಾಗಿ ಅದನ್ನು ಕಾಯ್ದಿರಿಸಲು ಕಂದಾಯ ಅಧಿಕಾರಿಗಳು ವಾರಕ್ಕೊಮ್ಮೆಯಾದರೂ ಗ್ರಾಮಗಳಿಗೆ ಭೇಟಿ ನೀಡಬೇಕು ಎಂದು ಹೇಳಿದರು.

ಭೂ ದಾಖಲೆಗಳ ಉಪ ನಿರ್ದೇಶಕರು ಗೋಮಾಳ ಭೂಮಿಯ ಸಮೀಕ್ಷೆಯನ್ನು ನಡೆಸಬೇಕು. ಭೂಮಿಯನ್ನು ಉಳುಮೆ ಮಾಡುತ್ತಿರುವ ರೈತರ ಪರವಾಗಿ ದಾಖಲೆಗಳನ್ನು ನೀಡಬೇಕೆಂದು ತಿಳಿಸಿದರು.

ಇದೇ ವೇಳೆ ಕಸ ನಿರ್ವಹಣೆ ಮತ್ತು ಬೀದಿದೀಪ ನಿರ್ವಹಣೆಯನ್ನು ಗಂಭೀರವಾಗಿ ಪರಿಗಣಿಸದ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಶ್ರೀರಾಮಪುರ, ಬೋಗಾದಿ, ಕಡಕೋಳ ಮತ್ತು ಇತರ ಪಟ್ಟಣ ಪಂಚಾಯಿತಿಗಳಲ್ಲಿ ಮೂಲಸೌಕರ್ಯ ಸುಧಾರಣೆಗೆ ಆದ್ಯತೆ ನೀಡಿ, ಕಬಿನಿ ನದಿಯ ಮೂಲಕ ನೀರು ಸರಬರಾಜು ಮಾಡಿ ಎಂದು ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಪಟ್ಟಣ ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಂಪನ್ಮೂಲಗಳು ಹೆಚ್ಚಳವಾಗಿದ್ದು, ಯಂತ್ರೋಪಕರಣಗಳು ಮತ್ತು ಟ್ರ್ಯಾಕ್ಟರ್‌ಗಳನ್ನು ಖರೀದಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು. ಗ್ರಾಮಗಳನ್ನು ಸ್ವಚ್ಛವಾಗಿಡಲು ಪೌರಕಾರ್ಮಿಕರನ್ನು ನೇಮಿಸಲು ಅನುಮತಿ ಕೋರಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT