ನೀರಿನ ಟ್ಯಾಂಕ್  
ರಾಜ್ಯ

ಎಲ್ಲಾ ನೀರಿನ ಟ್ಯಾಂಕ್‌ಗಳನ್ನು ಕೂಡಲೇ ಸ್ವಚ್ಛಗೊಳಿಸಿ: ಅಧಿಕಾರಿಗಳಿಗೆ GTD ಸೂಚನೆ

ಸರ್ಕಾರಿ ಭೂಮಿಯನ್ನು ಗುರುತಿಸಲು ಮತ್ತು ಆಸ್ಪತ್ರೆಗಳು, ಶಾಲೆಗಳು ಮತ್ತು ಸ್ಮಶಾನಗಳಂತಹ ಸಾರ್ವಜನಿಕ ಉದ್ದೇಶಗಳಿಗಾಗಿ ಅದನ್ನು ಕಾಯ್ದಿರಿಸಲು ಕಂದಾಯ ಅಧಿಕಾರಿಗಳು ವಾರಕ್ಕೊಮ್ಮೆಯಾದರೂ ಗ್ರಾಮಗಳಿಗೆ ಭೇಟಿ ನೀಡಬೇಕು.

ಮೈಸೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ನೀರು ಕಲುಷಿತಗೊಂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಾಜಿ ಸಚಿವ ಮತ್ತು ಶಾಸಕ ಜಿ.ಟಿ. ದೇವೇಗೌಡ ಅವರು, ತಮ್ಮ ವಿಧಾನಸಭಾ ಕ್ಷೇತ್ರದ ಎಲ್ಲಾ ಹಳ್ಳಿಗಳಲ್ಲಿನ ನೀರಿನ ಟ್ಯಾಂಕ್‌ಗಳನ್ನು ಕೂಡಲೇ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಬುಧವಾ ಸೂಚನೆ ನೀಡಿದ್ದಾರೆ.

ಬುಧವಾರ ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಟಿ ದೇವೇಗೌಡ ಅವರು ಮಾತನಾಡಿದರು.

ಈ ವೇಳೆ ಕ್ಷೇತ್ರದ ಎಲ್ಲಾ ನೀರಿನ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವಂತೆ ಸೂಚನೆ ನೀಡಿದ ಅವರು, ಆದೇಶವನ್ನು ಪಾಲಿಸದ ಪಂಚಾಯತ್ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಇದೇ ವೇಳೆ ಅರಣ್ಯದ ಅಂಚಿನಲ್ಲಿರುವ ಹಳ್ಳಿಗಳಲ್ಲಿ ಹೆಚ್ಚುತ್ತಿರುವ ವನ್ಯಜೀವಿಗಳ ಸಂಚಾರದ ಸಮಸ್ಯೆಯನ್ನು ಪರಿಹರಿಸಲು ಅರಣ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆಚ್ಚುವರಿಯಾಗಿ, ಸರ್ಕಾರಿ ಭೂಮಿಯನ್ನು ಗುರುತಿಸಲು ಮತ್ತು ಆಸ್ಪತ್ರೆಗಳು, ಶಾಲೆಗಳು ಮತ್ತು ಸ್ಮಶಾನಗಳಂತಹ ಸಾರ್ವಜನಿಕ ಉದ್ದೇಶಗಳಿಗಾಗಿ ಅದನ್ನು ಕಾಯ್ದಿರಿಸಲು ಕಂದಾಯ ಅಧಿಕಾರಿಗಳು ವಾರಕ್ಕೊಮ್ಮೆಯಾದರೂ ಗ್ರಾಮಗಳಿಗೆ ಭೇಟಿ ನೀಡಬೇಕು ಎಂದು ಹೇಳಿದರು.

ಭೂ ದಾಖಲೆಗಳ ಉಪ ನಿರ್ದೇಶಕರು ಗೋಮಾಳ ಭೂಮಿಯ ಸಮೀಕ್ಷೆಯನ್ನು ನಡೆಸಬೇಕು. ಭೂಮಿಯನ್ನು ಉಳುಮೆ ಮಾಡುತ್ತಿರುವ ರೈತರ ಪರವಾಗಿ ದಾಖಲೆಗಳನ್ನು ನೀಡಬೇಕೆಂದು ತಿಳಿಸಿದರು.

ಇದೇ ವೇಳೆ ಕಸ ನಿರ್ವಹಣೆ ಮತ್ತು ಬೀದಿದೀಪ ನಿರ್ವಹಣೆಯನ್ನು ಗಂಭೀರವಾಗಿ ಪರಿಗಣಿಸದ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಶ್ರೀರಾಮಪುರ, ಬೋಗಾದಿ, ಕಡಕೋಳ ಮತ್ತು ಇತರ ಪಟ್ಟಣ ಪಂಚಾಯಿತಿಗಳಲ್ಲಿ ಮೂಲಸೌಕರ್ಯ ಸುಧಾರಣೆಗೆ ಆದ್ಯತೆ ನೀಡಿ, ಕಬಿನಿ ನದಿಯ ಮೂಲಕ ನೀರು ಸರಬರಾಜು ಮಾಡಿ ಎಂದು ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಪಟ್ಟಣ ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಂಪನ್ಮೂಲಗಳು ಹೆಚ್ಚಳವಾಗಿದ್ದು, ಯಂತ್ರೋಪಕರಣಗಳು ಮತ್ತು ಟ್ರ್ಯಾಕ್ಟರ್‌ಗಳನ್ನು ಖರೀದಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು. ಗ್ರಾಮಗಳನ್ನು ಸ್ವಚ್ಛವಾಗಿಡಲು ಪೌರಕಾರ್ಮಿಕರನ್ನು ನೇಮಿಸಲು ಅನುಮತಿ ಕೋರಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT