ಸೀರೆಯಲ್ಲಿ 'ಆಪರೇಷನ್ ಸಿಂಧೂರ್' 
ರಾಜ್ಯ

ಮಿಲಿಟರಿ ಶಕ್ತಿಗೆ ಗೌರವ: ಸೀರೆಯಲ್ಲಿ 'ಆಪರೇಷನ್ ಸಿಂಧೂರ್' ಹೆಣೆದ ಗದಗ ವ್ಯಕ್ತಿ!

ಆಪರೇಷನ್ ಸಿಂದೂರ್ ಅನ್ನು ಸೀರೆಯ ಮೇಲೆ ಗೌರವಿಸುವ ಕಲ್ಪನೆಯು ಗಜೇಂದ್ರಗಡದ ನೇಕಾರ ತೇಜಪ್ಪ ಚಿನ್ನೂರ್ ಅವರ ಕನಸಿನ ಕೂಸು, ಇಂದು ಅನೇಕರು ಈ ಸೀರೆಯನ್ನು ಬಯಸುತ್ತಾ ಅವರ ವಿಳಾಸಕ್ಕೆ ಬರುತ್ತಿದ್ದಾರೆ.

ಗದಗ: ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದ ವಿರುದ್ಧ ಪ್ರಾರಂಭಿಸಿದ ಆಪರೇಷನ್ ಸಿಂದೂರ್ ಮಿಲಿಟರಿ ಕಾರ್ಯಾಚರಣೆ ಗದಗ ಜಿಲ್ಲೆಯಲ್ಲಿ ಜನಪ್ರಿಯ ಸೀರೆಗಳ ಸಾಲಿಗೆ ಸ್ಫೂರ್ತಿ ನೀಡಿದೆ.

ಆಪರೇಷನ್ ಸಿಂದೂರ್ ಅನ್ನು ಸೀರೆಯ ಮೇಲೆ ಗೌರವಿಸುವ ಕಲ್ಪನೆಯು ಗಜೇಂದ್ರಗಡದ ನೇಕಾರ ತೇಜಪ್ಪ ಚಿನ್ನೂರ್ ಅವರ ಕನಸಿನ ಕೂಸು, ಇಂದು ಅನೇಕರು ಈ ಸೀರೆಯನ್ನು ಕೊಂಡುಕೊಳ್ಳಲು ಅವರ ವಿಳಾಸ ಹುಡುಕಿಕೊಂಡು ಬರುತ್ತಿದ್ದಾರೆ.

ಈ ಸೀರೆಯನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದ್ದು, “ಆಪರೇಷನ್ ಸಿಂಧೂರ” ಎಂದು ದಪ್ಪವಾಗಿ ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ. ಸೀರೆಯ ರೇಷ್ಮೆ ಬಾರ್ಡರ್​ನಲ್ಲಿ ತ್ರಿವರ್ಣ ಧ್ವಜದ ಕಲರ್​ನಲ್ಲಿ ಮೂರು ಯುದ್ಧ ವಿಮಾನಗಳನ್ನು ಕಸೂತಿ ಮಾಡಲಾಗಿದೆ.
ತೇಜಪ್ಪ ಚಿನ್ನೂರ್- ನೇಕಾರ

ಈ ಸೀರೆಯನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದ್ದು, “ಆಪರೇಷನ್ ಸಿಂಧೂರ” ಎಂದು ದಪ್ಪವಾಗಿ ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ. ಸೀರೆಯ ರೇಷ್ಮೆ ಬಾರ್ಡರ್​ನಲ್ಲಿ ತ್ರಿವರ್ಣ ಧ್ವಜದ ಕಲರ್​ನಲ್ಲಿ ಮೂರು ಯುದ್ಧ ವಿಮಾನಗಳನ್ನು ಕಸೂತಿ ಮಾಡಲಾಗಿದೆ. ಗಜೇಂದ್ರಗಡ ಶುದ್ಧ ಹತ್ತಿ ನೂಲಿನಿಂದ ತಯಾರಿಸಲ್ಪಡುವ ಪಟ್ಟೇದಂಚಿನ ಸೀರೆಗಳಿಗೆ ಹೆಸರುವಾಸಿ. ಈ ವರ್ಷ ಅವುಗಳಿಗೆ ಜಿಐ ಟ್ಯಾಗ್ ಕೂಡ ಸಿಕ್ಕಿದೆ. ಪ್ರಸ್ತುತ, ಇಲ್ಲಿ ಸುಮಾರು 400 ಕೈಮಗ್ಗಗಳಿದ್ದು, ಅವುಗಳಲ್ಲಿ ಸುಮಾರು 200 ಕೈಮಗ್ಗಗಳಿಂದ ಈ ಪಟ್ಟೇದಂಚಿನ ಸೀರೆಗಳನ್ನು ನೇಯಲಾಗುತ್ತದೆ.

ಇನ್ನು ಈ ಹೊಸ ಬಗೆಯ ಆಪರೇಷನ್ ಸಿಂಧೂರ ಸೀರೆಗಳು ಸಹ ಇದೇ ವಿಧಕ್ಕೆ ಸೇರಿವೆ. ಇವುಗಳನ್ನು ಶುದ್ಧ ಹತ್ತಿಯಿಂದ ಮತ್ತು ರೇಷ್ಮೆ ಬಾರ್ಡರ್​​ನೊಂದಿಗೆ ತಯಾರಿಸಲಾಗುತ್ತದೆ. ಸೀರೆಯ ಒಂದು ಬದಿಯನ್ನು ಬಲಪಡಿಸಲು, ದಾರಗಳನ್ನು ತುಂಡುಗಳಾಗಿ ಕತ್ತರಿಸಲಾಗುತ್ತದೆ. ಬಳಿಕ ವಾರ್ಪ್ ತಯಾರಿಸಲಾಗುತ್ತದೆ. ಕೈಮಗ್ಗದಿಂದ ಸೀರೆಯಲ್ಲಿ ಸಾಂಪ್ರದಾಯಿಕ ವಿನ್ಯಾಸಗಳನ್ನು ರಚಿಸಲಾಗುತ್ತದೆ.

ಇನ್ನೊಂದು ವೈಶಿಷ್ಟ್ಯವೆಂದರೆ ಕನ್ನಡ ಭಾಷೆಯಲ್ಲಿ "ಕನ್ನಡ" ಎಂಬ ಪದವನ್ನು ನೇಯಲಾಗಿದೆ," ಎಂದು ಮತ್ತೊಬ್ಬ ನೇಕಾರ ಅಶೋಕ್ ಲಡ್ವಾ ಹೇಳಿದರು. ಪಟ್ಟೆ ಅಂಚಿನ ರೇಷ್ಮೆ ಸೀರೆಗಳ ಬೆಲೆ 2,000 ರಿಂದ 5,000 ರೂ.ಗಳವರೆಗೆ ಇರುತ್ತದೆ, ಆದರೆ ಆಪರೇಷನ್ ಸಿಂಧೂರ್ ಸೀರೆಗಳು ವಿಶೇಷವಾಗಿ ಗುಣಮಟ್ಟವನ್ನು ಅವಲಂಬಿಸಿ 4,000 ರೂ.ಗಳಿಂದ ಪ್ರಾರಂಭವಾಗಿ, 10,000 ರೂ.ಗಳವರೆಗೆ ಇರುತ್ತದೆ ಎಂದಿದ್ದಾರೆ.

40 ವರ್ಷಗಳಿಂದ, ತೇಜಪ್ಪ ಚಿನ್ನೂರ್ ಕೈಮಗ್ಗ ನೇಯ್ಗೆ ಕಲೆಯನ್ನು ಮುಂದುವರೆಸಿದ್ದಾರೆ, ಗಜೇಂದ್ರಗಡ ನೇಕಾರರ ಸಹಕಾರಿ ಉತ್ಪಾದಕರ ಸಂಘವನ್ನು ಸಹ ಸ್ಥಾಪಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ನಡೆಯುವ 11 ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಸಂದರ್ಭದಲ್ಲಿ ಅವರಿಗೆ 20,000 ರೂ. ಬಹುಮಾನ ಮತ್ತು ಸ್ಮರಣಿಕೆಯನ್ನು ನೀಡಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT