ಸಾಂದರ್ಭಿಕ ಚಿತ್ರ (File photo)
ರಾಜ್ಯ

ದಶಕಗಳಿಂದ ಖಾಕಿ ಸಮವಸ್ತ್ರದ ಮೇಲೆ ಬಳಸುತ್ತಿದ್ದ 'ಸ್ಲೋಚ್ ಕ್ಯಾಪ್‌' ಗೆ ಕೊಕ್: 'ನೇವಿ ಬ್ಲೂ ಪೀಕ್ ಕ್ಯಾಪ್' ವಿತರಿಸಲು ಸರ್ಕಾರ ಸಮ್ಮತಿ

ಹೊಸ ವಿನ್ಯಾಸವನ್ನು ತೆಲಂಗಾಣ ಪೊಲೀಸ್ ಕ್ಯಾಪ್ ಮಾದರಿಯಲ್ಲಿ ರೂಪಿಸಲಾಗಿದೆ, ಇದನ್ನು ಮಹಾರಾಷ್ಟ್ರ, ದೆಹಲಿ, ಗೋವಾ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳ ಕ್ಯಾಪ್ ಶೈಲಿಗಳನ್ನು ಪರಿಶೀಲಿಸಿದ ನಂತರ ಆಯ್ಕೆ ಮಾಡಲಾಗಿದೆ.

ಬೆಂಗಳೂರು: ರಾಜ್ಯದ ಹೆಡ್ ಕಾನ್‌ಸ್ಟೆಬಲ್‌ಗಳು, ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್‌ ಹ್ಯಾಟ್‌ (ಟೋಪಿ) ಬದಲಾಗಿ ‘ನೇವಿ ಬ್ಲೂ ಪೀಕ್ ಕ್ಯಾಪ್’ ವಿತರಿಸಲು ಸರ್ಕಾರ ಸಮ್ಮತಿ ನೀಡಿದೆ.

ಇತ್ತೀಚೆಗೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ, ಟೋಪಿ ಬದಲಾವಣೆ ಸಂಬಂಧ ಚರ್ಚಿಸಲಾಗಿತ್ತು. ರಾಜ್ಯ ಪೊಲೀಸರು ಕಾನ್‌ಸ್ಟೆಬಲ್‌ಗಳಿಗೆ ಹಸಿರು ಬೆರೆಟ್‌ಗಳನ್ನು ಪ್ರಸ್ತಾಪಿಸಿದ್ದರು. ಆದರೆ, ಹಸಿರು ಬೆರೆಟ್‌ಗಳು ಗೃಹರಕ್ಷಕರು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಧರಿಸುವುದನ್ನು ಹೋಲುತ್ತವೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅದರ ನೀಲಿ ಪೀಕ್ ಕ್ಯಾಪ್‌ಗಳನ್ನು ಆಯ್ಕೆ ಮಾಡಲು ಸೂಚಿಸಿದರು.

ಹೊಸ ವಿನ್ಯಾಸವನ್ನು ತೆಲಂಗಾಣ ಪೊಲೀಸ್ ಕ್ಯಾಪ್ ಮಾದರಿಯಲ್ಲಿ ರೂಪಿಸಲಾಗಿದೆ, ಇದನ್ನು ಮಹಾರಾಷ್ಟ್ರ, ದೆಹಲಿ, ಗೋವಾ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳ ಕ್ಯಾಪ್ ಶೈಲಿಗಳನ್ನು ಪರಿಶೀಲಿಸಿದ ನಂತರ ಆಯ್ಕೆ ಮಾಡಲಾಗಿದೆ.

ಸ್ಲೋಚ್ ಟೋಪಿ ಬ್ರಿಟಿಷ್ ಯುಗದಿಂದಲೂ ಕಾನ್‌ಸ್ಟೆಬ್ಯುಲರಿ ಸಮವಸ್ತ್ರದ ಭಾಗವಾಗಿದೆ, ಆದರೆ ಅನೇಕ ಅಧಿಕಾರಿಗಳು ಅದನ್ನು ಹಳೆಯದು ಮತ್ತು ಅನಾನುಕೂಲವೆಂದು ಅಭಿಪ್ರಾಯ ಪಟ್ಟಿದ್ದರು ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೇಳಿದರು, ಇದು ದೀರ್ಘಕಾಲದ ಪ್ರಸ್ತಾಪವಾಗಿತ್ತು. ದಶಕಗಳಿಂದ ಪೊಲೀಸರು ಖಾಕಿ ಸಮವಸ್ತ್ರದ ಮೇಲೆ ಬಳಸುತ್ತಿದ್ದ ಸ್ಲೋಚ್ ಕ್ಯಾಪ್‌ಗೆ ವಿದಾಯ ಹೇಳಲಾಗುತ್ತದೆ.

ಪೊಲೀಸ್ ಸಿಬ್ಬಂದಿಗೆ ಪೀಕ್ ಕ್ಯಾಪ್‌ಗಳನ್ನು ಖರೀದಿಸಲು ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸರ್ಕಾರ ಆದೇಶಿಸಿದೆ. ನೇವಿ ಬ್ಲೂ ಪೀಕ್ ಕ್ಯಾಪ್‌ಗಳನ್ನು ಖರೀದಿಸುವ ಸಂಬಂಧ ಟೆಂಡರ್ ಪ್ರಕ್ರಿಯೆ ಆರಂಭಿಸಲು ಆಗಸ್ಟ್‌ 7ರಂದು ಕೆಎಸ್‌ಆರ್‌ಪಿ ಎಡಿಜಿಪಿ ಉಮೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಿಟ್ ನಿರ್ದಿಷ್ಟತಾ ಸಮಿತಿ ಸಭೆ ಕರೆಯಲಾಗಿದೆ.

ಭಾರತೀಯ ನೌಕಾಪಡೆ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಗೋವಾ ಹಾಗೂ ದೆಹಲಿ ಸೇರಿದಂತೆ ಇತರೆ ರಾಜ್ಯಗಳ ಪೊಲೀಸರು ಧರಿಸುವ ಟೋಪಿಗಳನ್ನು ಇನ್ನುಮುಂದೆ ರಾಜ್ಯದ ಪೊಲೀಸ್ ಸಿಬ್ಬಂದಿ ಧರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT