ಸಾಂದರ್ಭಿಕ ಚಿತ್ರ (File photo)
ರಾಜ್ಯ

ದಶಕಗಳಿಂದ ಖಾಕಿ ಸಮವಸ್ತ್ರದ ಮೇಲೆ ಬಳಸುತ್ತಿದ್ದ 'ಸ್ಲೋಚ್ ಕ್ಯಾಪ್‌' ಗೆ ಕೊಕ್: 'ನೇವಿ ಬ್ಲೂ ಪೀಕ್ ಕ್ಯಾಪ್' ವಿತರಿಸಲು ಸರ್ಕಾರ ಸಮ್ಮತಿ

ಹೊಸ ವಿನ್ಯಾಸವನ್ನು ತೆಲಂಗಾಣ ಪೊಲೀಸ್ ಕ್ಯಾಪ್ ಮಾದರಿಯಲ್ಲಿ ರೂಪಿಸಲಾಗಿದೆ, ಇದನ್ನು ಮಹಾರಾಷ್ಟ್ರ, ದೆಹಲಿ, ಗೋವಾ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳ ಕ್ಯಾಪ್ ಶೈಲಿಗಳನ್ನು ಪರಿಶೀಲಿಸಿದ ನಂತರ ಆಯ್ಕೆ ಮಾಡಲಾಗಿದೆ.

ಬೆಂಗಳೂರು: ರಾಜ್ಯದ ಹೆಡ್ ಕಾನ್‌ಸ್ಟೆಬಲ್‌ಗಳು, ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್‌ ಹ್ಯಾಟ್‌ (ಟೋಪಿ) ಬದಲಾಗಿ ‘ನೇವಿ ಬ್ಲೂ ಪೀಕ್ ಕ್ಯಾಪ್’ ವಿತರಿಸಲು ಸರ್ಕಾರ ಸಮ್ಮತಿ ನೀಡಿದೆ.

ಇತ್ತೀಚೆಗೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ, ಟೋಪಿ ಬದಲಾವಣೆ ಸಂಬಂಧ ಚರ್ಚಿಸಲಾಗಿತ್ತು. ರಾಜ್ಯ ಪೊಲೀಸರು ಕಾನ್‌ಸ್ಟೆಬಲ್‌ಗಳಿಗೆ ಹಸಿರು ಬೆರೆಟ್‌ಗಳನ್ನು ಪ್ರಸ್ತಾಪಿಸಿದ್ದರು. ಆದರೆ, ಹಸಿರು ಬೆರೆಟ್‌ಗಳು ಗೃಹರಕ್ಷಕರು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಧರಿಸುವುದನ್ನು ಹೋಲುತ್ತವೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅದರ ನೀಲಿ ಪೀಕ್ ಕ್ಯಾಪ್‌ಗಳನ್ನು ಆಯ್ಕೆ ಮಾಡಲು ಸೂಚಿಸಿದರು.

ಹೊಸ ವಿನ್ಯಾಸವನ್ನು ತೆಲಂಗಾಣ ಪೊಲೀಸ್ ಕ್ಯಾಪ್ ಮಾದರಿಯಲ್ಲಿ ರೂಪಿಸಲಾಗಿದೆ, ಇದನ್ನು ಮಹಾರಾಷ್ಟ್ರ, ದೆಹಲಿ, ಗೋವಾ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳ ಕ್ಯಾಪ್ ಶೈಲಿಗಳನ್ನು ಪರಿಶೀಲಿಸಿದ ನಂತರ ಆಯ್ಕೆ ಮಾಡಲಾಗಿದೆ.

ಸ್ಲೋಚ್ ಟೋಪಿ ಬ್ರಿಟಿಷ್ ಯುಗದಿಂದಲೂ ಕಾನ್‌ಸ್ಟೆಬ್ಯುಲರಿ ಸಮವಸ್ತ್ರದ ಭಾಗವಾಗಿದೆ, ಆದರೆ ಅನೇಕ ಅಧಿಕಾರಿಗಳು ಅದನ್ನು ಹಳೆಯದು ಮತ್ತು ಅನಾನುಕೂಲವೆಂದು ಅಭಿಪ್ರಾಯ ಪಟ್ಟಿದ್ದರು ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೇಳಿದರು, ಇದು ದೀರ್ಘಕಾಲದ ಪ್ರಸ್ತಾಪವಾಗಿತ್ತು. ದಶಕಗಳಿಂದ ಪೊಲೀಸರು ಖಾಕಿ ಸಮವಸ್ತ್ರದ ಮೇಲೆ ಬಳಸುತ್ತಿದ್ದ ಸ್ಲೋಚ್ ಕ್ಯಾಪ್‌ಗೆ ವಿದಾಯ ಹೇಳಲಾಗುತ್ತದೆ.

ಪೊಲೀಸ್ ಸಿಬ್ಬಂದಿಗೆ ಪೀಕ್ ಕ್ಯಾಪ್‌ಗಳನ್ನು ಖರೀದಿಸಲು ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸರ್ಕಾರ ಆದೇಶಿಸಿದೆ. ನೇವಿ ಬ್ಲೂ ಪೀಕ್ ಕ್ಯಾಪ್‌ಗಳನ್ನು ಖರೀದಿಸುವ ಸಂಬಂಧ ಟೆಂಡರ್ ಪ್ರಕ್ರಿಯೆ ಆರಂಭಿಸಲು ಆಗಸ್ಟ್‌ 7ರಂದು ಕೆಎಸ್‌ಆರ್‌ಪಿ ಎಡಿಜಿಪಿ ಉಮೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಿಟ್ ನಿರ್ದಿಷ್ಟತಾ ಸಮಿತಿ ಸಭೆ ಕರೆಯಲಾಗಿದೆ.

ಭಾರತೀಯ ನೌಕಾಪಡೆ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಗೋವಾ ಹಾಗೂ ದೆಹಲಿ ಸೇರಿದಂತೆ ಇತರೆ ರಾಜ್ಯಗಳ ಪೊಲೀಸರು ಧರಿಸುವ ಟೋಪಿಗಳನ್ನು ಇನ್ನುಮುಂದೆ ರಾಜ್ಯದ ಪೊಲೀಸ್ ಸಿಬ್ಬಂದಿ ಧರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT