ನಟಿ ರಮ್ಯಾ  
ರಾಜ್ಯ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಇತ್ತೀಚೆಗೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಪರ ಸೋಷಿಯಲ್​ ಮೀಡಿಯಾದಲ್ಲಿ ಮಾತನಾಡಿದ್ದರು.

ಬೆಂಗಳೂರು: ನಟಿ ಮತ್ತು ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಬೆದರಿಕೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಪ್ರಸ್ತುತ ಬಂಧನಕ್ಕೊಳಗಾಗಿರುವ ಮತ್ತೋರ್ವ ಆರೋಪಿಯನ್ನು ಕೊಪ್ಪಳದ ಮಂಜುನಾಥ್ ಎಂದು ಗುರುತಿಸಲಾಗಿದೆ. ಇದಕ್ಕೂ ಮೊದಲು ಪೊಲೀಸರು ಟಿ ಓಬಣ್ಣ, ಗಂಗಾಧರ್, ರಾಜೇಶ್ ಮತ್ತು ಭುವನ್ ಗೌಡ ಎಂಬುವವರನ್ನು ಬಂಧಿಸಿದ್ದರು.

ಇತ್ತೀಚೆಗೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಪರ ಸೋಷಿಯಲ್​ ಮೀಡಿಯಾದಲ್ಲಿ ಮಾತನಾಡಿದ್ದರು. ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ ಎಂದು ಹೇಳಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ದರ್ಶನ್ ಅಭಿಮಾನಿಗಳು ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್​ಗಳಿಗೆ ಅಶ್ಲೀಲವಾಗಿ ಕಮೆಂಟ್​ಗಳನ್ನು ಮಾಡಿದ್ದರು. ಹೀಗಾಗಿ, ರಮ್ಯಾ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಸೈಬರ್ ಠಾಣೆಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆ

ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

SCROLL FOR NEXT